(ಸಾಂದರ್ಭಿಕ ಚಿತ್ರ ಕೃಪೆ- ನೆಟ್ )
ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ
ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ
ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ
ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು
ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ
ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು
ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.
ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ
#ಡಾ ವಾಣಿಶ್ರೀ ಕಾಸರಗೋಡು
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…