Advertisement
ಅನುಕ್ರಮ

ಕವನ | ದುರ್ಗದ ಓಬವ್ವ

Share

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

10 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago