Advertisement
ಅನುಕ್ರಮ

ಕವನ | ದುರ್ಗದ ಓಬವ್ವ

Share

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

Advertisement

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

6 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

13 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

13 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago