ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ
ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ
ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ
ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು
ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ
ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು
ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.
ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ
#ಡಾ ವಾಣಿಶ್ರೀ ಕಾಸರಗೋಡು
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…