Advertisement
ಅನುಕ್ರಮ

ಕವನ | ದುರ್ಗದ ಓಬವ್ವ

Share

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

13 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

20 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

20 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago