Advertisement
ಅನುಕ್ರಮ

ಕವನ | ದುರ್ಗದ ಓಬವ್ವ

Share

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago