Advertisement
ಅಂಕಣ

ಕವನ | ದುರ್ಗದ ಓಬವ್ವ

Share

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

Advertisement
Advertisement

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

Advertisement

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

Advertisement

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

Advertisement

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

Advertisement

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

4 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

13 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago