ಕವನ | ಅಂದು – ಇಂದು

June 4, 2021
10:17 PM
ಹೇ ಮಾನವ…. 
ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು…
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು… 
ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು…
ಕೊರೋನಾ ಬಂತೆಂದು ಹೆದರಿ ಉದ್ಯೋಗವನ್ನು ತೊರೆದು ಮರಳಿ ಹಳ್ಳಿಗೆ ಬಂದೆ ಇಂದು… 
 ಸಂಬಂಧಗಳ ಬೆಲೆಯನ್ನು ಮರೆತು ಹೋದೆ ಅಂದು… 
ಸಂಬಂಧಗಳ ನಿಜವಾದ ಬೆಲೆಯನ್ನು ತಿಳಿದು ಹಿಂತಿರುಗಿ ಬಂದೆ ಇಂದು… 
ಜೀವನದಲ್ಲಿ ಹಣವೇ ಮುಖ್ಯ ಎಂದು ತಿಳಿದಿದ್ದೆ ಅಂದು… 
ಹಣಕ್ಕಿಂತ ಗುಣ ಮುಖ್ಯ ಎಂದು ತಿಳಿದುಕೊಂಡೆ ಇಂದು… 
ದಿನನಿತ್ಯ ಮನೆಯಿಂದ ಹೊರಗೆ ಓಡಾಡುತ್ತಿದ್ದೆ ಅಂದು… 
ದಿನವಿಡೀ ಮನೆಯೊಳಗೆ ಕೂರುವಂತಾಯಿತು ಇಂದು…
ತನ್ನ ಕಷ್ಟವೇ ದೊಡ್ಡದು ಎಂದುಕೊಂಡಿದ್ದೆ ಅಂದು… 
ಇತರರ ಕಷ್ಟಗಳಿಗೆ ಸ್ಪಂದಿಸುತ್ತಿರುವೆ ಇಂದು… 
ತನಗೆ ಕಷ್ಟ ಬಾರದಿರಲಿ ಎಂದು ಪ್ರಾರ್ಥಿಸುತ್ತಿದ್ದೆ ಅಂದು… 
ಜಗತ್ತು ಈ ಕಷ್ಟದಿಂದ ಮುಕ್ತವಾಗಲಿ ಎಂದು ಪ್ರಾರ್ಥಿಸುತ್ತಿರುವೆ ಇಂದು…
ಈ ಜಗತ್ತಿನಲ್ಲಿ ತನಗೊಬ್ಬನಿಗೆ ಇಷ್ಟೊಂದು ಕಷ್ಟ ಎಂದು ನೋವು ಅನುಭವಿಸುತ್ತಿದ್ದೆ ಅಂದು… 
ತನಗಿಂತ ಕಷ್ಟದಲ್ಲಿರುವವರ ಕಷ್ಟದ ಮುಂದೆ ತನ್ನ ಕಷ್ಟ ಏನೇನೂ ಅಲ್ಲ ಎಂದು ತಿಳಿದುಕೊಂಡೆ ಇಂದು… 
ಮಾನವೀಯತೆಯನ್ನು ಮರೆತು ವರ್ತಿಸಿದ್ದೆ ಅಂದು… 
ಮಾನವೀಯತೆಯ ನಿಜವಾದ ಬೆಲೆಯನ್ನು ತಿಳಿದುಕೊಂಡೆ ಇಂದು… 
ಹೇ ಮಾನವ ನಿನ್ನ ಬದುಕಿನ ರೀತಿ ಹೇಗಿತ್ತು ಅಂದು… 
ಹೇಗೆ ಬದಲಾಯಿತು ಇಂದು… 
ಈ ಬದಲಾವಣೆಗೆ ಕಾರಣವಾದರೂ ಏನು…? ಕಣ್ಣಿಗೆ ಕಾಣದ ಒಂದು ಪುಟ್ಟ ಜೀವಿ “ಕೊರೊನಾ” …! 
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ವೃದ್ಧಾಪ್ಯದಲ್ಲಿ ಬೇಕಾಗಿರುವುದು ಹಣವಲ್ಲ, ಗೌರವ ಮತ್ತು ಆತ್ಮೀಯತೆ
May 15, 2026
8:33 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ
May 1, 2026
10:20 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror