Advertisement
ಅನುಕ್ರಮ

ಕವನ | ಅಂದು – ಇಂದು

Share
ಹೇ ಮಾನವ….
ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು…
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು…
ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು…
ಕೊರೋನಾ ಬಂತೆಂದು ಹೆದರಿ ಉದ್ಯೋಗವನ್ನು ತೊರೆದು ಮರಳಿ ಹಳ್ಳಿಗೆ ಬಂದೆ ಇಂದು…
ಸಂಬಂಧಗಳ ಬೆಲೆಯನ್ನು ಮರೆತು ಹೋದೆ ಅಂದು…
ಸಂಬಂಧಗಳ ನಿಜವಾದ ಬೆಲೆಯನ್ನು ತಿಳಿದು ಹಿಂತಿರುಗಿ ಬಂದೆ ಇಂದು…
ಜೀವನದಲ್ಲಿ ಹಣವೇ ಮುಖ್ಯ ಎಂದು ತಿಳಿದಿದ್ದೆ ಅಂದು…
ಹಣಕ್ಕಿಂತ ಗುಣ ಮುಖ್ಯ ಎಂದು ತಿಳಿದುಕೊಂಡೆ ಇಂದು…
ದಿನನಿತ್ಯ ಮನೆಯಿಂದ ಹೊರಗೆ ಓಡಾಡುತ್ತಿದ್ದೆ ಅಂದು…
ದಿನವಿಡೀ ಮನೆಯೊಳಗೆ ಕೂರುವಂತಾಯಿತು ಇಂದು…
ತನ್ನ ಕಷ್ಟವೇ ದೊಡ್ಡದು ಎಂದುಕೊಂಡಿದ್ದೆ ಅಂದು…
ಇತರರ ಕಷ್ಟಗಳಿಗೆ ಸ್ಪಂದಿಸುತ್ತಿರುವೆ ಇಂದು…
ತನಗೆ ಕಷ್ಟ ಬಾರದಿರಲಿ ಎಂದು ಪ್ರಾರ್ಥಿಸುತ್ತಿದ್ದೆ ಅಂದು…
ಜಗತ್ತು ಈ ಕಷ್ಟದಿಂದ ಮುಕ್ತವಾಗಲಿ ಎಂದು ಪ್ರಾರ್ಥಿಸುತ್ತಿರುವೆ ಇಂದು…
ಈ ಜಗತ್ತಿನಲ್ಲಿ ತನಗೊಬ್ಬನಿಗೆ ಇಷ್ಟೊಂದು ಕಷ್ಟ ಎಂದು ನೋವು ಅನುಭವಿಸುತ್ತಿದ್ದೆ ಅಂದು…
ತನಗಿಂತ ಕಷ್ಟದಲ್ಲಿರುವವರ ಕಷ್ಟದ ಮುಂದೆ ತನ್ನ ಕಷ್ಟ ಏನೇನೂ ಅಲ್ಲ ಎಂದು ತಿಳಿದುಕೊಂಡೆ ಇಂದು…
ಮಾನವೀಯತೆಯನ್ನು ಮರೆತು ವರ್ತಿಸಿದ್ದೆ ಅಂದು…
ಮಾನವೀಯತೆಯ ನಿಜವಾದ ಬೆಲೆಯನ್ನು ತಿಳಿದುಕೊಂಡೆ ಇಂದು…
ಹೇ ಮಾನವ ನಿನ್ನ ಬದುಕಿನ ರೀತಿ ಹೇಗಿತ್ತು ಅಂದು…
ಹೇಗೆ ಬದಲಾಯಿತು ಇಂದು…
ಈ ಬದಲಾವಣೆಗೆ ಕಾರಣವಾದರೂ ಏನು…? ಕಣ್ಣಿಗೆ ಕಾಣದ ಒಂದು ಪುಟ್ಟ ಜೀವಿ “ಕೊರೊನಾ” …!
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

9 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

9 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

11 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

12 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

23 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago