Advertisement
ಅನುಕ್ರಮ

ಕವನ | ಅಂದು – ಇಂದು

Share
ಹೇ ಮಾನವ….
ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು…
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು…
ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು…
ಕೊರೋನಾ ಬಂತೆಂದು ಹೆದರಿ ಉದ್ಯೋಗವನ್ನು ತೊರೆದು ಮರಳಿ ಹಳ್ಳಿಗೆ ಬಂದೆ ಇಂದು…
ಸಂಬಂಧಗಳ ಬೆಲೆಯನ್ನು ಮರೆತು ಹೋದೆ ಅಂದು…
ಸಂಬಂಧಗಳ ನಿಜವಾದ ಬೆಲೆಯನ್ನು ತಿಳಿದು ಹಿಂತಿರುಗಿ ಬಂದೆ ಇಂದು…
ಜೀವನದಲ್ಲಿ ಹಣವೇ ಮುಖ್ಯ ಎಂದು ತಿಳಿದಿದ್ದೆ ಅಂದು…
ಹಣಕ್ಕಿಂತ ಗುಣ ಮುಖ್ಯ ಎಂದು ತಿಳಿದುಕೊಂಡೆ ಇಂದು…
ದಿನನಿತ್ಯ ಮನೆಯಿಂದ ಹೊರಗೆ ಓಡಾಡುತ್ತಿದ್ದೆ ಅಂದು…
ದಿನವಿಡೀ ಮನೆಯೊಳಗೆ ಕೂರುವಂತಾಯಿತು ಇಂದು…
ತನ್ನ ಕಷ್ಟವೇ ದೊಡ್ಡದು ಎಂದುಕೊಂಡಿದ್ದೆ ಅಂದು…
ಇತರರ ಕಷ್ಟಗಳಿಗೆ ಸ್ಪಂದಿಸುತ್ತಿರುವೆ ಇಂದು…
ತನಗೆ ಕಷ್ಟ ಬಾರದಿರಲಿ ಎಂದು ಪ್ರಾರ್ಥಿಸುತ್ತಿದ್ದೆ ಅಂದು…
ಜಗತ್ತು ಈ ಕಷ್ಟದಿಂದ ಮುಕ್ತವಾಗಲಿ ಎಂದು ಪ್ರಾರ್ಥಿಸುತ್ತಿರುವೆ ಇಂದು…
ಈ ಜಗತ್ತಿನಲ್ಲಿ ತನಗೊಬ್ಬನಿಗೆ ಇಷ್ಟೊಂದು ಕಷ್ಟ ಎಂದು ನೋವು ಅನುಭವಿಸುತ್ತಿದ್ದೆ ಅಂದು…
ತನಗಿಂತ ಕಷ್ಟದಲ್ಲಿರುವವರ ಕಷ್ಟದ ಮುಂದೆ ತನ್ನ ಕಷ್ಟ ಏನೇನೂ ಅಲ್ಲ ಎಂದು ತಿಳಿದುಕೊಂಡೆ ಇಂದು…
ಮಾನವೀಯತೆಯನ್ನು ಮರೆತು ವರ್ತಿಸಿದ್ದೆ ಅಂದು…
ಮಾನವೀಯತೆಯ ನಿಜವಾದ ಬೆಲೆಯನ್ನು ತಿಳಿದುಕೊಂಡೆ ಇಂದು…
ಹೇ ಮಾನವ ನಿನ್ನ ಬದುಕಿನ ರೀತಿ ಹೇಗಿತ್ತು ಅಂದು…
ಹೇಗೆ ಬದಲಾಯಿತು ಇಂದು…
ಈ ಬದಲಾವಣೆಗೆ ಕಾರಣವಾದರೂ ಏನು…? ಕಣ್ಣಿಗೆ ಕಾಣದ ಒಂದು ಪುಟ್ಟ ಜೀವಿ “ಕೊರೊನಾ” …!
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago