ಅನುಕ್ರಮ

ಕವನ | ಅಂದು – ಇಂದು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಹೇ ಮಾನವ….
ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು…
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು…
ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು…
ಕೊರೋನಾ ಬಂತೆಂದು ಹೆದರಿ ಉದ್ಯೋಗವನ್ನು ತೊರೆದು ಮರಳಿ ಹಳ್ಳಿಗೆ ಬಂದೆ ಇಂದು…
ಸಂಬಂಧಗಳ ಬೆಲೆಯನ್ನು ಮರೆತು ಹೋದೆ ಅಂದು…
ಸಂಬಂಧಗಳ ನಿಜವಾದ ಬೆಲೆಯನ್ನು ತಿಳಿದು ಹಿಂತಿರುಗಿ ಬಂದೆ ಇಂದು…
ಜೀವನದಲ್ಲಿ ಹಣವೇ ಮುಖ್ಯ ಎಂದು ತಿಳಿದಿದ್ದೆ ಅಂದು…
ಹಣಕ್ಕಿಂತ ಗುಣ ಮುಖ್ಯ ಎಂದು ತಿಳಿದುಕೊಂಡೆ ಇಂದು…
ದಿನನಿತ್ಯ ಮನೆಯಿಂದ ಹೊರಗೆ ಓಡಾಡುತ್ತಿದ್ದೆ ಅಂದು…
ದಿನವಿಡೀ ಮನೆಯೊಳಗೆ ಕೂರುವಂತಾಯಿತು ಇಂದು…
ತನ್ನ ಕಷ್ಟವೇ ದೊಡ್ಡದು ಎಂದುಕೊಂಡಿದ್ದೆ ಅಂದು…
ಇತರರ ಕಷ್ಟಗಳಿಗೆ ಸ್ಪಂದಿಸುತ್ತಿರುವೆ ಇಂದು…
ತನಗೆ ಕಷ್ಟ ಬಾರದಿರಲಿ ಎಂದು ಪ್ರಾರ್ಥಿಸುತ್ತಿದ್ದೆ ಅಂದು…
ಜಗತ್ತು ಈ ಕಷ್ಟದಿಂದ ಮುಕ್ತವಾಗಲಿ ಎಂದು ಪ್ರಾರ್ಥಿಸುತ್ತಿರುವೆ ಇಂದು…
ಈ ಜಗತ್ತಿನಲ್ಲಿ ತನಗೊಬ್ಬನಿಗೆ ಇಷ್ಟೊಂದು ಕಷ್ಟ ಎಂದು ನೋವು ಅನುಭವಿಸುತ್ತಿದ್ದೆ ಅಂದು…
ತನಗಿಂತ ಕಷ್ಟದಲ್ಲಿರುವವರ ಕಷ್ಟದ ಮುಂದೆ ತನ್ನ ಕಷ್ಟ ಏನೇನೂ ಅಲ್ಲ ಎಂದು ತಿಳಿದುಕೊಂಡೆ ಇಂದು…
ಮಾನವೀಯತೆಯನ್ನು ಮರೆತು ವರ್ತಿಸಿದ್ದೆ ಅಂದು…
ಮಾನವೀಯತೆಯ ನಿಜವಾದ ಬೆಲೆಯನ್ನು ತಿಳಿದುಕೊಂಡೆ ಇಂದು…
ಹೇ ಮಾನವ ನಿನ್ನ ಬದುಕಿನ ರೀತಿ ಹೇಗಿತ್ತು ಅಂದು…
ಹೇಗೆ ಬದಲಾಯಿತು ಇಂದು…
ಈ ಬದಲಾವಣೆಗೆ ಕಾರಣವಾದರೂ ಏನು…? ಕಣ್ಣಿಗೆ ಕಾಣದ ಒಂದು ಪುಟ್ಟ ಜೀವಿ “ಕೊರೊನಾ” …!
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

8 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

9 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

9 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

19 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago