Advertisement
ಅನುಕ್ರಮ

ಕವನ | ಅಂದು – ಇಂದು

Share
ಹೇ ಮಾನವ….
ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು…
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು…
ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು…
ಕೊರೋನಾ ಬಂತೆಂದು ಹೆದರಿ ಉದ್ಯೋಗವನ್ನು ತೊರೆದು ಮರಳಿ ಹಳ್ಳಿಗೆ ಬಂದೆ ಇಂದು…
ಸಂಬಂಧಗಳ ಬೆಲೆಯನ್ನು ಮರೆತು ಹೋದೆ ಅಂದು…
ಸಂಬಂಧಗಳ ನಿಜವಾದ ಬೆಲೆಯನ್ನು ತಿಳಿದು ಹಿಂತಿರುಗಿ ಬಂದೆ ಇಂದು…
ಜೀವನದಲ್ಲಿ ಹಣವೇ ಮುಖ್ಯ ಎಂದು ತಿಳಿದಿದ್ದೆ ಅಂದು…
ಹಣಕ್ಕಿಂತ ಗುಣ ಮುಖ್ಯ ಎಂದು ತಿಳಿದುಕೊಂಡೆ ಇಂದು…
ದಿನನಿತ್ಯ ಮನೆಯಿಂದ ಹೊರಗೆ ಓಡಾಡುತ್ತಿದ್ದೆ ಅಂದು…
ದಿನವಿಡೀ ಮನೆಯೊಳಗೆ ಕೂರುವಂತಾಯಿತು ಇಂದು…
ತನ್ನ ಕಷ್ಟವೇ ದೊಡ್ಡದು ಎಂದುಕೊಂಡಿದ್ದೆ ಅಂದು…
ಇತರರ ಕಷ್ಟಗಳಿಗೆ ಸ್ಪಂದಿಸುತ್ತಿರುವೆ ಇಂದು…
ತನಗೆ ಕಷ್ಟ ಬಾರದಿರಲಿ ಎಂದು ಪ್ರಾರ್ಥಿಸುತ್ತಿದ್ದೆ ಅಂದು…
ಜಗತ್ತು ಈ ಕಷ್ಟದಿಂದ ಮುಕ್ತವಾಗಲಿ ಎಂದು ಪ್ರಾರ್ಥಿಸುತ್ತಿರುವೆ ಇಂದು…
ಈ ಜಗತ್ತಿನಲ್ಲಿ ತನಗೊಬ್ಬನಿಗೆ ಇಷ್ಟೊಂದು ಕಷ್ಟ ಎಂದು ನೋವು ಅನುಭವಿಸುತ್ತಿದ್ದೆ ಅಂದು…
ತನಗಿಂತ ಕಷ್ಟದಲ್ಲಿರುವವರ ಕಷ್ಟದ ಮುಂದೆ ತನ್ನ ಕಷ್ಟ ಏನೇನೂ ಅಲ್ಲ ಎಂದು ತಿಳಿದುಕೊಂಡೆ ಇಂದು…
ಮಾನವೀಯತೆಯನ್ನು ಮರೆತು ವರ್ತಿಸಿದ್ದೆ ಅಂದು…
ಮಾನವೀಯತೆಯ ನಿಜವಾದ ಬೆಲೆಯನ್ನು ತಿಳಿದುಕೊಂಡೆ ಇಂದು…
ಹೇ ಮಾನವ ನಿನ್ನ ಬದುಕಿನ ರೀತಿ ಹೇಗಿತ್ತು ಅಂದು…
ಹೇಗೆ ಬದಲಾಯಿತು ಇಂದು…
ಈ ಬದಲಾವಣೆಗೆ ಕಾರಣವಾದರೂ ಏನು…? ಕಣ್ಣಿಗೆ ಕಾಣದ ಒಂದು ಪುಟ್ಟ ಜೀವಿ “ಕೊರೊನಾ” …!
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

5 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

13 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

15 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

20 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

22 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago