Advertisement
ಅನುಕ್ರಮ

ಕವನ | ಅಂದು – ಇಂದು

Share
ಹೇ ಮಾನವ….
ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು…
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು…
ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು…
ಕೊರೋನಾ ಬಂತೆಂದು ಹೆದರಿ ಉದ್ಯೋಗವನ್ನು ತೊರೆದು ಮರಳಿ ಹಳ್ಳಿಗೆ ಬಂದೆ ಇಂದು…
ಸಂಬಂಧಗಳ ಬೆಲೆಯನ್ನು ಮರೆತು ಹೋದೆ ಅಂದು…
ಸಂಬಂಧಗಳ ನಿಜವಾದ ಬೆಲೆಯನ್ನು ತಿಳಿದು ಹಿಂತಿರುಗಿ ಬಂದೆ ಇಂದು…
ಜೀವನದಲ್ಲಿ ಹಣವೇ ಮುಖ್ಯ ಎಂದು ತಿಳಿದಿದ್ದೆ ಅಂದು…
ಹಣಕ್ಕಿಂತ ಗುಣ ಮುಖ್ಯ ಎಂದು ತಿಳಿದುಕೊಂಡೆ ಇಂದು…
ದಿನನಿತ್ಯ ಮನೆಯಿಂದ ಹೊರಗೆ ಓಡಾಡುತ್ತಿದ್ದೆ ಅಂದು…
ದಿನವಿಡೀ ಮನೆಯೊಳಗೆ ಕೂರುವಂತಾಯಿತು ಇಂದು…
ತನ್ನ ಕಷ್ಟವೇ ದೊಡ್ಡದು ಎಂದುಕೊಂಡಿದ್ದೆ ಅಂದು…
ಇತರರ ಕಷ್ಟಗಳಿಗೆ ಸ್ಪಂದಿಸುತ್ತಿರುವೆ ಇಂದು…
ತನಗೆ ಕಷ್ಟ ಬಾರದಿರಲಿ ಎಂದು ಪ್ರಾರ್ಥಿಸುತ್ತಿದ್ದೆ ಅಂದು…
ಜಗತ್ತು ಈ ಕಷ್ಟದಿಂದ ಮುಕ್ತವಾಗಲಿ ಎಂದು ಪ್ರಾರ್ಥಿಸುತ್ತಿರುವೆ ಇಂದು…
ಈ ಜಗತ್ತಿನಲ್ಲಿ ತನಗೊಬ್ಬನಿಗೆ ಇಷ್ಟೊಂದು ಕಷ್ಟ ಎಂದು ನೋವು ಅನುಭವಿಸುತ್ತಿದ್ದೆ ಅಂದು…
ತನಗಿಂತ ಕಷ್ಟದಲ್ಲಿರುವವರ ಕಷ್ಟದ ಮುಂದೆ ತನ್ನ ಕಷ್ಟ ಏನೇನೂ ಅಲ್ಲ ಎಂದು ತಿಳಿದುಕೊಂಡೆ ಇಂದು…
ಮಾನವೀಯತೆಯನ್ನು ಮರೆತು ವರ್ತಿಸಿದ್ದೆ ಅಂದು…
ಮಾನವೀಯತೆಯ ನಿಜವಾದ ಬೆಲೆಯನ್ನು ತಿಳಿದುಕೊಂಡೆ ಇಂದು…
ಹೇ ಮಾನವ ನಿನ್ನ ಬದುಕಿನ ರೀತಿ ಹೇಗಿತ್ತು ಅಂದು…
ಹೇಗೆ ಬದಲಾಯಿತು ಇಂದು…
ಈ ಬದಲಾವಣೆಗೆ ಕಾರಣವಾದರೂ ಏನು…? ಕಣ್ಣಿಗೆ ಕಾಣದ ಒಂದು ಪುಟ್ಟ ಜೀವಿ “ಕೊರೊನಾ” …!
# ಉಲ್ಲಾಸ್ ಕಜ್ಜೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

4 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

6 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

7 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago