#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

August 24, 2023
4:48 PM
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.

ಕಾವೇರಿ #Cuavery ನೀರಿಗಾಗಿ ತಮಿಳುನಾಡು ಖ್ಯಾತೆ ಮುಗಿಯುವಂತದಲ್ಲ. ಒಂದಲ್ಲ ಒಂದು ಖ್ಯಾತೆ ತೆಗೆಯುತ್ತಲೇ ಇರುತ್ತದೆ. ನೀರು ಕೊಟ್ಟರೂ ಸಮಸ್ಯೆ, ಬಿಟ್ಟಿಲ್ಲ ಅಂದ್ರೆ ಸಮಸ್ಯೆ ಇದ್ದದ್ದೇ. ನಮ್ಮಲ್ಲೇ ಮಳೆ ಕಮ್ಮಿಯಾಗಿ ಈ ಬಾರಿ ಬರದ #Drought ಛಾಯೆ ಆವರಿಸಿದೆ. ಹಾಗಿದ್ದು ಕಾವೇರಿ ನೀರು ಬಿಡಲೇ ಬೇಕು ಎಂದು ತಮಿಳುನಾಡು ವರಸೆ ತೆಗೆದಿದೆ. ನಾಳೆ ಸುಪ್ರೀಂ ಕೋರ್ಟ್‌ #SupremeCourtನಲ್ಲಿ ತಮಿಳುನಾಡು ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ಸಹ ಅಫಿಡವಿಟ್ ಸಲ್ಲಿಸಿದೆ.

Advertisement
Advertisement

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.

Advertisement

ಕರ್ನಾಟಕದ ಅಫಿಡೆವಿಟ್ನಲ್ಲಿ ಏನಿದೆ? : ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ# CWMA ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ.

ಆದರೆ, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಾಖಲೆಗಳ ಸಹಿತ ಕರ್ನಾಟಕ ತನ್ನ ಅಫಿಡೆವಿಟ್ ನಲ್ಲಿ ಆರೋಪಿಸಿದೆ.

Advertisement

Source: Digital Media

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror