Advertisement
ಪ್ರಮುಖ

#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

Share

ಕಾವೇರಿ #Cuavery ನೀರಿಗಾಗಿ ತಮಿಳುನಾಡು ಖ್ಯಾತೆ ಮುಗಿಯುವಂತದಲ್ಲ. ಒಂದಲ್ಲ ಒಂದು ಖ್ಯಾತೆ ತೆಗೆಯುತ್ತಲೇ ಇರುತ್ತದೆ. ನೀರು ಕೊಟ್ಟರೂ ಸಮಸ್ಯೆ, ಬಿಟ್ಟಿಲ್ಲ ಅಂದ್ರೆ ಸಮಸ್ಯೆ ಇದ್ದದ್ದೇ. ನಮ್ಮಲ್ಲೇ ಮಳೆ ಕಮ್ಮಿಯಾಗಿ ಈ ಬಾರಿ ಬರದ #Drought ಛಾಯೆ ಆವರಿಸಿದೆ. ಹಾಗಿದ್ದು ಕಾವೇರಿ ನೀರು ಬಿಡಲೇ ಬೇಕು ಎಂದು ತಮಿಳುನಾಡು ವರಸೆ ತೆಗೆದಿದೆ. ನಾಳೆ ಸುಪ್ರೀಂ ಕೋರ್ಟ್‌ #SupremeCourtನಲ್ಲಿ ತಮಿಳುನಾಡು ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ಸಹ ಅಫಿಡವಿಟ್ ಸಲ್ಲಿಸಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.

ಕರ್ನಾಟಕದ ಅಫಿಡೆವಿಟ್ನಲ್ಲಿ ಏನಿದೆ? : ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ# CWMA ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ.

ಆದರೆ, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಾಖಲೆಗಳ ಸಹಿತ ಕರ್ನಾಟಕ ತನ್ನ ಅಫಿಡೆವಿಟ್ ನಲ್ಲಿ ಆರೋಪಿಸಿದೆ.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago