Advertisement
ಪ್ರಮುಖ

#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

Share

ಕಾವೇರಿ #Cuavery ನೀರಿಗಾಗಿ ತಮಿಳುನಾಡು ಖ್ಯಾತೆ ಮುಗಿಯುವಂತದಲ್ಲ. ಒಂದಲ್ಲ ಒಂದು ಖ್ಯಾತೆ ತೆಗೆಯುತ್ತಲೇ ಇರುತ್ತದೆ. ನೀರು ಕೊಟ್ಟರೂ ಸಮಸ್ಯೆ, ಬಿಟ್ಟಿಲ್ಲ ಅಂದ್ರೆ ಸಮಸ್ಯೆ ಇದ್ದದ್ದೇ. ನಮ್ಮಲ್ಲೇ ಮಳೆ ಕಮ್ಮಿಯಾಗಿ ಈ ಬಾರಿ ಬರದ #Drought ಛಾಯೆ ಆವರಿಸಿದೆ. ಹಾಗಿದ್ದು ಕಾವೇರಿ ನೀರು ಬಿಡಲೇ ಬೇಕು ಎಂದು ತಮಿಳುನಾಡು ವರಸೆ ತೆಗೆದಿದೆ. ನಾಳೆ ಸುಪ್ರೀಂ ಕೋರ್ಟ್‌ #SupremeCourtನಲ್ಲಿ ತಮಿಳುನಾಡು ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ಸಹ ಅಫಿಡವಿಟ್ ಸಲ್ಲಿಸಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.

ಕರ್ನಾಟಕದ ಅಫಿಡೆವಿಟ್ನಲ್ಲಿ ಏನಿದೆ? : ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ# CWMA ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ.

ಆದರೆ, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಾಖಲೆಗಳ ಸಹಿತ ಕರ್ನಾಟಕ ತನ್ನ ಅಫಿಡೆವಿಟ್ ನಲ್ಲಿ ಆರೋಪಿಸಿದೆ.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

5 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

5 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

5 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

11 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

13 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

14 hours ago