Advertisement
ಪ್ರಮುಖ

#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

Share

ಕಾವೇರಿ #Cuavery ನೀರಿಗಾಗಿ ತಮಿಳುನಾಡು ಖ್ಯಾತೆ ಮುಗಿಯುವಂತದಲ್ಲ. ಒಂದಲ್ಲ ಒಂದು ಖ್ಯಾತೆ ತೆಗೆಯುತ್ತಲೇ ಇರುತ್ತದೆ. ನೀರು ಕೊಟ್ಟರೂ ಸಮಸ್ಯೆ, ಬಿಟ್ಟಿಲ್ಲ ಅಂದ್ರೆ ಸಮಸ್ಯೆ ಇದ್ದದ್ದೇ. ನಮ್ಮಲ್ಲೇ ಮಳೆ ಕಮ್ಮಿಯಾಗಿ ಈ ಬಾರಿ ಬರದ #Drought ಛಾಯೆ ಆವರಿಸಿದೆ. ಹಾಗಿದ್ದು ಕಾವೇರಿ ನೀರು ಬಿಡಲೇ ಬೇಕು ಎಂದು ತಮಿಳುನಾಡು ವರಸೆ ತೆಗೆದಿದೆ. ನಾಳೆ ಸುಪ್ರೀಂ ಕೋರ್ಟ್‌ #SupremeCourtನಲ್ಲಿ ತಮಿಳುನಾಡು ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕವು ಸಹ ಅಫಿಡವಿಟ್ ಸಲ್ಲಿಸಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ ಸಹ ನೀರು ಹರಿಸಿ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆ. ಆದರೂ ತಮಿಳುನಾಡು ಇನ್ನೂ ಬೇಕು ಬೇಕು ಎಂದು ಹೇಳುವ ಮೂಲಕ ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕರ್ನಾಟಕ ಅಫಿಡೆವಿಟ್ನಲ್ಲಿ ಆರೋಪಿಸಿದೆ.

ಕರ್ನಾಟಕದ ಅಫಿಡೆವಿಟ್ನಲ್ಲಿ ಏನಿದೆ? : ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ# CWMA ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ.

ಆದರೆ, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಾಖಲೆಗಳ ಸಹಿತ ಕರ್ನಾಟಕ ತನ್ನ ಅಫಿಡೆವಿಟ್ ನಲ್ಲಿ ಆರೋಪಿಸಿದೆ.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

31 minutes ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

8 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago