ಜೀವನಾಡಿ ಕಾವೇರಿಗೆ ಸಿಎಂ ಬಾಗಿನ : ಮೆಟ್ಟೂರು ಡ್ಯಾಂನಿಂದ ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ : ಮೈದುಂಬಿ ಹರಿಯುತ್ತಿರುವ ಘಟಪ್ರಭಾ

July 29, 2024
12:38 PM

ಯಥೇಚ್ಚವಾಗಿ ಮಳೆ(Rain) ಸುರಿದು ರಾಜ್ಯದ ಅಣೆಕಟ್ಟುಗಳು(Dam) ತುಂಬಿದರೆ ರೈತರಿಗೆ, ನಾಡಿಗೆ, ಸಕಲ ಜೀವ ರಾಶಿಗಳಿಗೆ ಹಬ್ಬ. ಈ ಸಂಭ್ರಮವನ್ನು ಜಲ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ತಮ್ಮನ್ನು ಹರಸು ತಾಯೇ ಎಂದು ಬೇಡಿಕೊಳ್ಳಲಾಗುತ್ತದೆ. ಕಳೆದ ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ(KRS Dam) ಸಿಎಂ ಸಿದ್ದರಾಮಯ್ಯ (Siddaramaiah) ಇಂದು ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್‌ಎಸ್ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಲಿದ್ದಾರೆ.

ಯಾವಾಗಲೂ ಜಲಾಶಯ ಭರ್ತಿಯಾದ ಅಥವಾ ಭರ್ತಿಯಾಗಿ 3ನೇ ದಿನ ಬಾಗಿನ ಸಲ್ಲಿಸುವುದು ವಾಡಿಕೆ. ಈ ಬಾರಿ ಜಲಾಶಯ ತುಂಬಿದ ಐದಾರು ದಿನಗಳ ಬಳಿಕ ಬಾಗಿನ ಸಲ್ಲಿಸಲಾಗುತ್ತಿದೆ. ಇಂದು ನಡೆಯುವ ಬಾಗಿನ ಸಮಾರಂಭಕ್ಕೆ ಜಿಲ್ಲಾಡಳಿತ, ಕಾವೇರಿ ನೀರಾವರಿ ನಿಗಮ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಾಡಿಕೆಯಂತೆ ಡಿಸಿಎಂ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಡ್ಯಾಂಗಳು ಭರ್ತಿಯಾಗಿದೆ. ಮಂಡ್ಯದ ಕೆಆರ್‌ಎಸ್‌ ಜಲಾಶಯದಿಂದ (KRS Dam) ಭಾರೀ ಪ್ರಮಾಣದ ನೀರನ್ನು ಹೊರ ಬಿಟ್ಟ ಪರಿಣಾಮ ಮೆಟ್ಟೂರು ಜಲಾಶಯ (Mettur Dam) ಬಹುತೇಕ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗುತ್ತಿದ್ದಂತೆ ತಮಿಳುನಾಡು ಸರ್ಕಾರ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವಂತೆ ಭಾನುವಾರ ಆದೇಶಿಸಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ದುರೈಮುರುಗನ್ ಹಾಗೂ ಇತರರು ಪರಿಸ್ಥಿತಿಯನ್ನು ಅವಲೋಕಿಸಿ ನೀರು ಬಿಡುವಂತೆ ಸೂಚಿಸಲಾಯಿತು. 120 ಅಡಿ ಎತ್ತರದ ಮೆಟ್ಟೂರು ಅಣೆಕಟ್ಟಿನ ನೀರಿನ ಮಟ್ಟ 109.20 ಅಡಿಗೆ ಏರಿದ್ದು, ಅಣೆಕಟ್ಟು ತುಂಬಲು ಕೇವಲ 11 ಅಡಿಗಳಷ್ಟೇ ಬಾಕಿ ಇದೆ. ಆದ್ದರಿಂದ ಮೆಟ್ಟೂರು ಜಲಾಶಯದಿಂದ ತಕ್ಷಣವೇ ನೀರನ್ನು ಹರಿಬಿಡಲ ಸೂಚಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ್ (Mudol) ತಾಲೂಕಿನ ಮಿರ್ಜಿ ಹಾಗೂ ಚನಾಳ್ ಗ್ರಾಮದಲ್ಲಿ ಘಟಪ್ರಭಾ ನದಿ (Ghatprabha River) ಮೈದುಂಬಿ ಹರಿಯುತ್ತಿದ್ದು, ಎರಡು ಗ್ರಾಮಗಳಲ್ಲೂ ಪ್ರವಾಹದ (Flood) ಪ್ರರಿಸ್ಥಿತಿ ಎದುರಾಗಿದೆ.

ಮಿರ್ಜಿ ಗ್ರಾಮದ 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಪರಿಣಾಮ ನೂರಕ್ಕೂ ಹೆಚ್ಚು ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇದರ ನಡುವೆಯೇ ಜನ ಮನೆಯಲ್ಲಿದ್ದ ದವಸ ಧಾನ್ಯಗಳನ್ನು ರಕ್ಷಣೆಗೆ ಪರದಾಡುತ್ತಿದ್ದಾರೆ. ದಿನಬಳಕೆಯ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ. ಮಿರ್ಜಿ ಗ್ರಾಮಸ್ಥರಿಗೆ 2019 ರಿಂದಲೂ ಘಟಪ್ರಭಾ ನದಿಯ ಪ್ರವಾಹದ ಗೋಳು ಎದುರಾಗಿದೆ. ಗ್ರಾಮವನ್ನು ಶಾಶ್ವತವಾಗಿ ಸ್ಥಳಾಂತರ ಮಾಡುವಂತೆ ಜನ ಅಂದಿನಿಂದಲೂ ಮನವಿ ಮಾಡುತ್ತಿದ್ದಾರೆ. ಈ ಕೂಗಿಗೆ ಈವರೆಗೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror