Advertisement
MIRROR FOCUS

ಕಾವೇರಿ ಪುಣ್ಯ ಕ್ಷೇತ್ರದಲ್ಲಿ ತೀರ್ಥ ರೂಪಿಣಿಯಾಗಿ ಬಂದ ಜೀವನದಿ ಕಾವೇರಿ | ತಲಕಾವೇರಿ ಕ್ಷೇತ್ರದಲ್ಲಿ ಹಬ್ಬದ ಸಂಭ್ರಮ | 1 ನಿಮಿಷ ಮೊದಲೇ ತೀರ್ಥೋದ್ಭವ

Share

ಬ್ರಹ್ಮಗಿರಿ ತಪ್ಪಲಿನಲ್ಲಿರುವ ತಲಕಾವೇರಿ ಕ್ಷೇತ್ರದಲ್ಲಿ ನಾಡಿನ ಜೀವನದಿ ಕಾವೇರಿ ತೀರ್ಥೋದ್ಭವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಕಕಾ೯ಟಕ ಲಗ್ನದಲ್ಲಿ ಜರುಗಿತು. 1 ಗಂಟೆ 26 ನಿಮಿಷಕ್ಕೆ ಸರಿಯಾಗಿ ಪುಟ್ಟ ಕುಂಡಿಕೆಯಲ್ಲಿ ಕಾವೇರಿ ತನ್ನ ತೀಥ೯ ರೂಪವನ್ನು ತೋರಿದಳು. ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾಳೆ. ಮಾತೆ ಕಾವೇರಿಯ ತೀಥ೯ಸ್ವರೂಪವನ್ನು ಕಂಡ ಕಾವೇರಿ ಭಕ್ತರು ಧನ್ಯತಾ ಭಾವ ತಳೆದರು.

ಜೈ ಜೈ ಮಾತಾ ಕಾವೇರಿ ಮಾತ ಎಂಬ ಹಷೋ೯ದ್ಗಾರದೊಂದಿಗೆ ಕಾವೇರಿ ತೀಥೋ೯ದ್ವವವನ್ನು ತಲಕಾವೇರಿ ಕ್ಷೇತ್ರದಲ್ಲಿ ಸೇರಿದ್ದ ಭಕ್ತರು ವೀಕ್ಷಿಸಿ ಪುನೀತರಾದರು. ತೀಥೋ೯ದ್ವವ ನೆರವೇರುತ್ತಿದ್ದಂತೆಯೇ ಅಚ೯ಕರು ಪವಿತ್ರ ತೀಥ೯ವನ್ನು ಭಕ್ತಾಧಿಗಳ ಮೇಲೆ ಪ್ರೋಕ್ಷಣೆ ಮಾಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜ್, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ.ಪಂ. ಮುಖ್ಯಕಾಯ೯ನಿವ೯ಹಣಾಧಿಕಾರಿ ವಣಿ೯ತ್ ನೇಗಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. ಸಿನಿಮಾ ರಂಗದ ನವ ಜೋಡಿ ಭುವನ್ ಪೊನ್ನಣ್ಣ. ಹರ್ಷಿಕಾ ಪೂಣಚ್ಚ ಕೂಡ ಹಾಜರಿದ್ದರು.

ಕಾವೇರಿ ತೀಥೋ೯ದ್ವವಕ್ಕೆ ಕೊಡಗಿನ ವಿವಿಧೆಡೆಗಳಿಂದ ನಡುರಾತ್ರಿಯ ಕೊರೆಯುವ ಛಳಿಯಲ್ಲಿಯೂ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ಭಾಗಮಂಡಲದಿಂದ ತಲಕಾವೇರಿಗೆ ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಅಂತೆಯೇ ಸಕಾ೯ರಿ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಕಾವೇರಿ ಕ್ಷೇತ್ರದಲ್ಲೀಗ ಹಬ್ಬದ ಸಂಭ್ರಮ ಕಳೆಗಟ್ಟಿದೆ. ತಲಕಾವೇರಿ ಕ್ಷೇತ್ರದಲ್ಲಿ ಕೊಡಗು ಏಕೀಕರಣ ರಂಗದಿಂದ ಸಹಸ್ರಾರು ಭಕ್ತರಿಗೆ ಇನ್ನು 1 ತಿಂಗಳ ಕಾಲ ಅನ್ನಸಂತಪ೯ಣೆ ನಡೆಯಲಿದೆ. ಬುಧವಾರ ಜಿಲ್ಲೆಯ ವಿವಿಧೆಡೆಗಳಿಂದ ಮಾತ್ರವಲ್ಲದೇ ರಾಜ್ದದ ಹಲವೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಾವೇರಿ ಕ್ಷೇತ್ರಕ್ಕೆ ಬಂದು ಪುಣ್ಯ ತೀಥ೯ ಸ್ವೀಕರಿಸಲಿದ್ದು ಅನೇಕ ಗ್ರಾಮಗಳಿಂದ ಸಕಾ೯ರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

 

In Talakaveri field at the foothills of Brahmagiri, Kakatak Lagna took place in the presence of thousands of devotees of Kaveri Titho99dva, the life of the country. At exactly 1 hour and 26 minutes, Kaveri showed its original form in a small bowl. She gave darshan to thousands of devotees who had gathered as Tirtha Rupini in Cancer Lagna as scheduled. Kaveri devotees were thankful to see the form of Mother Kaveri.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

8 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

9 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

21 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

22 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

23 hours ago