MIRROR FOCUS

ಕಾವೇರಿ ಪುಣ್ಯ ಕ್ಷೇತ್ರದಲ್ಲಿ ತೀರ್ಥ ರೂಪಿಣಿಯಾಗಿ ಬಂದ ಜೀವನದಿ ಕಾವೇರಿ | ತಲಕಾವೇರಿ ಕ್ಷೇತ್ರದಲ್ಲಿ ಹಬ್ಬದ ಸಂಭ್ರಮ | 1 ನಿಮಿಷ ಮೊದಲೇ ತೀರ್ಥೋದ್ಭವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬ್ರಹ್ಮಗಿರಿ ತಪ್ಪಲಿನಲ್ಲಿರುವ ತಲಕಾವೇರಿ ಕ್ಷೇತ್ರದಲ್ಲಿ ನಾಡಿನ ಜೀವನದಿ ಕಾವೇರಿ ತೀರ್ಥೋದ್ಭವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಕಕಾ೯ಟಕ ಲಗ್ನದಲ್ಲಿ ಜರುಗಿತು. 1 ಗಂಟೆ 26 ನಿಮಿಷಕ್ಕೆ ಸರಿಯಾಗಿ ಪುಟ್ಟ ಕುಂಡಿಕೆಯಲ್ಲಿ ಕಾವೇರಿ ತನ್ನ ತೀಥ೯ ರೂಪವನ್ನು ತೋರಿದಳು. ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾಳೆ. ಮಾತೆ ಕಾವೇರಿಯ ತೀಥ೯ಸ್ವರೂಪವನ್ನು ಕಂಡ ಕಾವೇರಿ ಭಕ್ತರು ಧನ್ಯತಾ ಭಾವ ತಳೆದರು.

Advertisement

ಜೈ ಜೈ ಮಾತಾ ಕಾವೇರಿ ಮಾತ ಎಂಬ ಹಷೋ೯ದ್ಗಾರದೊಂದಿಗೆ ಕಾವೇರಿ ತೀಥೋ೯ದ್ವವವನ್ನು ತಲಕಾವೇರಿ ಕ್ಷೇತ್ರದಲ್ಲಿ ಸೇರಿದ್ದ ಭಕ್ತರು ವೀಕ್ಷಿಸಿ ಪುನೀತರಾದರು. ತೀಥೋ೯ದ್ವವ ನೆರವೇರುತ್ತಿದ್ದಂತೆಯೇ ಅಚ೯ಕರು ಪವಿತ್ರ ತೀಥ೯ವನ್ನು ಭಕ್ತಾಧಿಗಳ ಮೇಲೆ ಪ್ರೋಕ್ಷಣೆ ಮಾಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜ್, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ.ಪಂ. ಮುಖ್ಯಕಾಯ೯ನಿವ೯ಹಣಾಧಿಕಾರಿ ವಣಿ೯ತ್ ನೇಗಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. ಸಿನಿಮಾ ರಂಗದ ನವ ಜೋಡಿ ಭುವನ್ ಪೊನ್ನಣ್ಣ. ಹರ್ಷಿಕಾ ಪೂಣಚ್ಚ ಕೂಡ ಹಾಜರಿದ್ದರು.

ಕಾವೇರಿ ತೀಥೋ೯ದ್ವವಕ್ಕೆ ಕೊಡಗಿನ ವಿವಿಧೆಡೆಗಳಿಂದ ನಡುರಾತ್ರಿಯ ಕೊರೆಯುವ ಛಳಿಯಲ್ಲಿಯೂ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ಭಾಗಮಂಡಲದಿಂದ ತಲಕಾವೇರಿಗೆ ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಅಂತೆಯೇ ಸಕಾ೯ರಿ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಕಾವೇರಿ ಕ್ಷೇತ್ರದಲ್ಲೀಗ ಹಬ್ಬದ ಸಂಭ್ರಮ ಕಳೆಗಟ್ಟಿದೆ. ತಲಕಾವೇರಿ ಕ್ಷೇತ್ರದಲ್ಲಿ ಕೊಡಗು ಏಕೀಕರಣ ರಂಗದಿಂದ ಸಹಸ್ರಾರು ಭಕ್ತರಿಗೆ ಇನ್ನು 1 ತಿಂಗಳ ಕಾಲ ಅನ್ನಸಂತಪ೯ಣೆ ನಡೆಯಲಿದೆ. ಬುಧವಾರ ಜಿಲ್ಲೆಯ ವಿವಿಧೆಡೆಗಳಿಂದ ಮಾತ್ರವಲ್ಲದೇ ರಾಜ್ದದ ಹಲವೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಾವೇರಿ ಕ್ಷೇತ್ರಕ್ಕೆ ಬಂದು ಪುಣ್ಯ ತೀಥ೯ ಸ್ವೀಕರಿಸಲಿದ್ದು ಅನೇಕ ಗ್ರಾಮಗಳಿಂದ ಸಕಾ೯ರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

 

In Talakaveri field at the foothills of Brahmagiri, Kakatak Lagna took place in the presence of thousands of devotees of Kaveri Titho99dva, the life of the country. At exactly 1 hour and 26 minutes, Kaveri showed its original form in a small bowl. She gave darshan to thousands of devotees who had gathered as Tirtha Rupini in Cancer Lagna as scheduled. Kaveri devotees were thankful to see the form of Mother Kaveri.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುದ್ಧ……

ಅವಶ್ಯವಾದರೆ ದೇಶದ ರಕ್ಷಣೆಗಾಗಿ ಯಾವ ತ್ಯಾಗಕ್ಕಾದರೂ ಸಿದ್ದರಾಗೋಣ. ಆದರೆ ಹುಚ್ಚುತನದ ಭಾವನಾತ್ಮಕ ಅಭಿಪ್ರಾಯಗಳಿಗೆ…

3 minutes ago

ಮೇ 14 ರಂದು ವೃಷಭ ರಾಶಿಗೆ ಸೂರ್ಯನು ಪ್ರವೇಶಿಸುತ್ತಾ ಬುದಾದಿತ್ಯ ಯೋಗ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 minutes ago

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

13 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

13 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

21 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

1 day ago