Advertisement
ಸುದ್ದಿಗಳು

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |

Share

ಶಿಕ್ಷಕಿ ಕವಿತಾ ಅಡೂರು ಅವರು ಬರೆದ ‘ಎಲ್ಲರೊಳಗೊಂದಾಗು’ ಎಂಬ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು. ಈ ಪುಸ್ತಕದಲ್ಲಿ ಮಂಕು ತಿಮ್ಮನ ಕಗ್ಗದ ವ್ಯಾಖ್ಯಾನವುಳ್ಳ ಕಗ್ಗದ ಬೆಳಕು ಅಂಕಣ ಬರೆಹಗಳ ಸಂಗ್ರಹವಿದೆ.

ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಶಾಲೆಯ ಅಂಗ ಸಂಸ್ಥೆಯಾದ ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್‌ಮೆಂಟ್ ಸಂಸ್ಥೆಯ ಆಶ್ರಯದಲ್ಲಿ  ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು.  ಸುದಾನ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಡಾ ಪೀಟರ್ ವಿಲ್ಸನ್ ಪ್ರಭಾಕರ್ ಅವರು “ಬದುಕಿನ ನೋವು-ನಲಿವು ಸಮಸ್ಯೆಗಳಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ತಿಳಿಸುತ್ತಾ ನಮ್ಮೊಳ ಹೊಕ್ಕು ಪರಿಶೀಲಿಸಿಕೊಳ್ಳುವುದಕ್ಕೆ ಕಗ್ಗದ ಓದು ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯ ಪಟ್ಟರು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಫ್ರೊ ವಿ ಬಿ ಅರ್ತಿಕಜೆಯವರು ” ಈ ಪುಸ್ತಕದಲ್ಲಿ ಮಂಕುತಿಮ್ಮನ ಕಗ್ಗದ ಚೌಪದಿಗಳ ಧ್ವನ್ಯಾರ್ಥವನ್ನು ಗದ್ಯ ರೂಪದಲ್ಲಿ ಬರೆದಿರುವುದರಿಂದ ಸಾಮಾನ್ಯ ಜನರೂ ಕಗ್ಗದ ಆಶಯವನ್ನು ಅರ್ಥ ಮಾಡಿಕೊಳ್ಳುವ ಹಾಗಾಗಿದೆ. ಶ್ಲಾಘನೀಯ ಕಾರ್ಯ ಇದು ” ಎಂದು ನುಡಿದರು.

ಕೃತಿಕಾರರಾದ ಕವಿತಾ ಅಡೂರು ” ಮಂಕುತಿಮ್ಮನ ಕಗ್ಗವು ನೊಂದವರ ಬದುಕಿಗೆ ನೆಮ್ಮದಿಯನ್ನು ನೀಡಲಿ ಎಂಬ ಡಿವಿಜಿಯವರ ಆಶಯವು ಸಾಕಾರಗೊಳ್ಳಲಿ.” ಎಂದು ಹಾರೈಸಿದರು.

ಕೃತಿ ಸಮೀಕ್ಷೆಯನ್ನು ಮಾಡಿ ಮಾತನಾಡಿದ ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆಯವರು ” ಎಲ್ಲರೊಳಗೊಂದಾಗು ಎಂಬ ಈ ಪುಸ್ತಕದಲ್ಲಿ ಸಾಹಿತ್ಯ, ವಿಜ್ಞಾನ,ಸಾಮಾಜಿಕ ಬದುಕಿನ ಚಿತ್ರಣ,ವೇದಾಂತ ಮುಂತಾದವುಗಳಿವೆ. ಎಲ್ಲದಕ್ಕಿಂತಲೂ ಮುಖ್ಯವಾಗಿ ನೊಂದ ಮನಸ್ಸಿಗೆ ಸಾಂತ್ವನವಿದೆ, ಸಮಸ್ಯೆಗಳಿಗೆ ಪರಿಹಾರ ಇದೆ.” ಎಂದು ನುಡಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಹಿರಿಯ ವಿದ್ವಾಂಸರಾದ ಮಂಜುಳಗಿರಿ ವೆಂಕಟರಮಣ ಭಟ್ ರವರು “ತಮ್ಮ ಆಶ್ರಯದಲ್ಲಿರುವ ಉದ್ಯೋಗಿಯೊಬ್ಬರ ಪ್ರತಿಭೆಯನ್ನು ಗುರುತಿಸಿ ಪೋಷಿಸುವ, ಪ್ರೋತ್ಸಾಹಿಸುವ ಸುದಾನ ಸಂಸ್ಥೆಯ ಉದಾತ್ತಗುಣವು ಶ್ಲಾಘನೀಯ” ಎಂದು ನುಡಿದರು.

ವೇದಿಕೆಯಲ್ಲಿ‌ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ ರೆ ವಿಜಯ ಹಾರ್ವಿನ್ ರವರು “ಶಿಕ್ಷಕರು ಮಕ್ಕಳಿಗೆ ಆದರ್ಶವಾಗಬೇಕು, ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನೋವಿಕಾಸಕ್ಕೆ ಅತ್ಯಗತ್ಯ” ಎಂದು ನುಡಿದರು.

ಶಾಲಾ ಮುಖ್ಯ ಶಿಕ್ಷಕಿ  ಶೋಭಾ ನಾಗರಾಜ್ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಹಶಿಕ್ಷಕಿ ಅನಿತಾ ಕೃತಿಕಾರರನ್ನು ಪರಿಚಯಿಸಿದರು. ಸಹಶಿಕ್ಷಕಿ ಅಮೃತವಾಣಿ ವಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಅಕ್ಷರ ಕೆ ಸಿ, ಮಾನ್ವಿ ವಿಶ್ವನಾಥ,ಗ್ರೀಷ್ಮಾ ಡಿವಿಜಿ ರಚನೆಯ ವನಸುಮದೊಲೆನ್ನ ಪದ್ಯದ ಮೂಲಕ ಪ್ರಾರ್ಥನೆಯನ್ನು ನೆರವೇರಿಸಿದರು. .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

18 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago