ಶಿಕ್ಷಕಿ ಕವಿತಾ ಅಡೂರು ಅವರು ಬರೆದ ‘ಎಲ್ಲರೊಳಗೊಂದಾಗು’ ಎಂಬ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು. ಈ ಪುಸ್ತಕದಲ್ಲಿ ಮಂಕು ತಿಮ್ಮನ ಕಗ್ಗದ ವ್ಯಾಖ್ಯಾನವುಳ್ಳ ಕಗ್ಗದ ಬೆಳಕು ಅಂಕಣ ಬರೆಹಗಳ ಸಂಗ್ರಹವಿದೆ.
ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಶಾಲೆಯ ಅಂಗ ಸಂಸ್ಥೆಯಾದ ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್ಮೆಂಟ್ ಸಂಸ್ಥೆಯ ಆಶ್ರಯದಲ್ಲಿ ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು. ಸುದಾನ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಡಾ ಪೀಟರ್ ವಿಲ್ಸನ್ ಪ್ರಭಾಕರ್ ಅವರು “ಬದುಕಿನ ನೋವು-ನಲಿವು ಸಮಸ್ಯೆಗಳಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ತಿಳಿಸುತ್ತಾ ನಮ್ಮೊಳ ಹೊಕ್ಕು ಪರಿಶೀಲಿಸಿಕೊಳ್ಳುವುದಕ್ಕೆ ಕಗ್ಗದ ಓದು ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯ ಪಟ್ಟರು.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಫ್ರೊ ವಿ ಬಿ ಅರ್ತಿಕಜೆಯವರು ” ಈ ಪುಸ್ತಕದಲ್ಲಿ ಮಂಕುತಿಮ್ಮನ ಕಗ್ಗದ ಚೌಪದಿಗಳ ಧ್ವನ್ಯಾರ್ಥವನ್ನು ಗದ್ಯ ರೂಪದಲ್ಲಿ ಬರೆದಿರುವುದರಿಂದ ಸಾಮಾನ್ಯ ಜನರೂ ಕಗ್ಗದ ಆಶಯವನ್ನು ಅರ್ಥ ಮಾಡಿಕೊಳ್ಳುವ ಹಾಗಾಗಿದೆ. ಶ್ಲಾಘನೀಯ ಕಾರ್ಯ ಇದು ” ಎಂದು ನುಡಿದರು.
ಕೃತಿಕಾರರಾದ ಕವಿತಾ ಅಡೂರು ” ಮಂಕುತಿಮ್ಮನ ಕಗ್ಗವು ನೊಂದವರ ಬದುಕಿಗೆ ನೆಮ್ಮದಿಯನ್ನು ನೀಡಲಿ ಎಂಬ ಡಿವಿಜಿಯವರ ಆಶಯವು ಸಾಕಾರಗೊಳ್ಳಲಿ.” ಎಂದು ಹಾರೈಸಿದರು.
ಕೃತಿ ಸಮೀಕ್ಷೆಯನ್ನು ಮಾಡಿ ಮಾತನಾಡಿದ ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆಯವರು ” ಎಲ್ಲರೊಳಗೊಂದಾಗು ಎಂಬ ಈ ಪುಸ್ತಕದಲ್ಲಿ ಸಾಹಿತ್ಯ, ವಿಜ್ಞಾನ,ಸಾಮಾಜಿಕ ಬದುಕಿನ ಚಿತ್ರಣ,ವೇದಾಂತ ಮುಂತಾದವುಗಳಿವೆ. ಎಲ್ಲದಕ್ಕಿಂತಲೂ ಮುಖ್ಯವಾಗಿ ನೊಂದ ಮನಸ್ಸಿಗೆ ಸಾಂತ್ವನವಿದೆ, ಸಮಸ್ಯೆಗಳಿಗೆ ಪರಿಹಾರ ಇದೆ.” ಎಂದು ನುಡಿದರು.
ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಹಿರಿಯ ವಿದ್ವಾಂಸರಾದ ಮಂಜುಳಗಿರಿ ವೆಂಕಟರಮಣ ಭಟ್ ರವರು “ತಮ್ಮ ಆಶ್ರಯದಲ್ಲಿರುವ ಉದ್ಯೋಗಿಯೊಬ್ಬರ ಪ್ರತಿಭೆಯನ್ನು ಗುರುತಿಸಿ ಪೋಷಿಸುವ, ಪ್ರೋತ್ಸಾಹಿಸುವ ಸುದಾನ ಸಂಸ್ಥೆಯ ಉದಾತ್ತಗುಣವು ಶ್ಲಾಘನೀಯ” ಎಂದು ನುಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ ರೆ ವಿಜಯ ಹಾರ್ವಿನ್ ರವರು “ಶಿಕ್ಷಕರು ಮಕ್ಕಳಿಗೆ ಆದರ್ಶವಾಗಬೇಕು, ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನೋವಿಕಾಸಕ್ಕೆ ಅತ್ಯಗತ್ಯ” ಎಂದು ನುಡಿದರು.
ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಹಶಿಕ್ಷಕಿ ಅನಿತಾ ಕೃತಿಕಾರರನ್ನು ಪರಿಚಯಿಸಿದರು. ಸಹಶಿಕ್ಷಕಿ ಅಮೃತವಾಣಿ ವಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಅಕ್ಷರ ಕೆ ಸಿ, ಮಾನ್ವಿ ವಿಶ್ವನಾಥ,ಗ್ರೀಷ್ಮಾ ಡಿವಿಜಿ ರಚನೆಯ ವನಸುಮದೊಲೆನ್ನ ಪದ್ಯದ ಮೂಲಕ ಪ್ರಾರ್ಥನೆಯನ್ನು ನೆರವೇರಿಸಿದರು. .
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…