Advertisement
ಸುದ್ದಿಗಳು

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |

Share

ಶಿಕ್ಷಕಿ ಕವಿತಾ ಅಡೂರು ಅವರು ಬರೆದ ‘ಎಲ್ಲರೊಳಗೊಂದಾಗು’ ಎಂಬ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು. ಈ ಪುಸ್ತಕದಲ್ಲಿ ಮಂಕು ತಿಮ್ಮನ ಕಗ್ಗದ ವ್ಯಾಖ್ಯಾನವುಳ್ಳ ಕಗ್ಗದ ಬೆಳಕು ಅಂಕಣ ಬರೆಹಗಳ ಸಂಗ್ರಹವಿದೆ.

ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಶಾಲೆಯ ಅಂಗ ಸಂಸ್ಥೆಯಾದ ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್‌ಮೆಂಟ್ ಸಂಸ್ಥೆಯ ಆಶ್ರಯದಲ್ಲಿ  ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು.  ಸುದಾನ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಡಾ ಪೀಟರ್ ವಿಲ್ಸನ್ ಪ್ರಭಾಕರ್ ಅವರು “ಬದುಕಿನ ನೋವು-ನಲಿವು ಸಮಸ್ಯೆಗಳಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ತಿಳಿಸುತ್ತಾ ನಮ್ಮೊಳ ಹೊಕ್ಕು ಪರಿಶೀಲಿಸಿಕೊಳ್ಳುವುದಕ್ಕೆ ಕಗ್ಗದ ಓದು ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯ ಪಟ್ಟರು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಫ್ರೊ ವಿ ಬಿ ಅರ್ತಿಕಜೆಯವರು ” ಈ ಪುಸ್ತಕದಲ್ಲಿ ಮಂಕುತಿಮ್ಮನ ಕಗ್ಗದ ಚೌಪದಿಗಳ ಧ್ವನ್ಯಾರ್ಥವನ್ನು ಗದ್ಯ ರೂಪದಲ್ಲಿ ಬರೆದಿರುವುದರಿಂದ ಸಾಮಾನ್ಯ ಜನರೂ ಕಗ್ಗದ ಆಶಯವನ್ನು ಅರ್ಥ ಮಾಡಿಕೊಳ್ಳುವ ಹಾಗಾಗಿದೆ. ಶ್ಲಾಘನೀಯ ಕಾರ್ಯ ಇದು ” ಎಂದು ನುಡಿದರು.

ಕೃತಿಕಾರರಾದ ಕವಿತಾ ಅಡೂರು ” ಮಂಕುತಿಮ್ಮನ ಕಗ್ಗವು ನೊಂದವರ ಬದುಕಿಗೆ ನೆಮ್ಮದಿಯನ್ನು ನೀಡಲಿ ಎಂಬ ಡಿವಿಜಿಯವರ ಆಶಯವು ಸಾಕಾರಗೊಳ್ಳಲಿ.” ಎಂದು ಹಾರೈಸಿದರು.

ಕೃತಿ ಸಮೀಕ್ಷೆಯನ್ನು ಮಾಡಿ ಮಾತನಾಡಿದ ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆಯವರು ” ಎಲ್ಲರೊಳಗೊಂದಾಗು ಎಂಬ ಈ ಪುಸ್ತಕದಲ್ಲಿ ಸಾಹಿತ್ಯ, ವಿಜ್ಞಾನ,ಸಾಮಾಜಿಕ ಬದುಕಿನ ಚಿತ್ರಣ,ವೇದಾಂತ ಮುಂತಾದವುಗಳಿವೆ. ಎಲ್ಲದಕ್ಕಿಂತಲೂ ಮುಖ್ಯವಾಗಿ ನೊಂದ ಮನಸ್ಸಿಗೆ ಸಾಂತ್ವನವಿದೆ, ಸಮಸ್ಯೆಗಳಿಗೆ ಪರಿಹಾರ ಇದೆ.” ಎಂದು ನುಡಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಹಿರಿಯ ವಿದ್ವಾಂಸರಾದ ಮಂಜುಳಗಿರಿ ವೆಂಕಟರಮಣ ಭಟ್ ರವರು “ತಮ್ಮ ಆಶ್ರಯದಲ್ಲಿರುವ ಉದ್ಯೋಗಿಯೊಬ್ಬರ ಪ್ರತಿಭೆಯನ್ನು ಗುರುತಿಸಿ ಪೋಷಿಸುವ, ಪ್ರೋತ್ಸಾಹಿಸುವ ಸುದಾನ ಸಂಸ್ಥೆಯ ಉದಾತ್ತಗುಣವು ಶ್ಲಾಘನೀಯ” ಎಂದು ನುಡಿದರು.

ವೇದಿಕೆಯಲ್ಲಿ‌ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ ರೆ ವಿಜಯ ಹಾರ್ವಿನ್ ರವರು “ಶಿಕ್ಷಕರು ಮಕ್ಕಳಿಗೆ ಆದರ್ಶವಾಗಬೇಕು, ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನೋವಿಕಾಸಕ್ಕೆ ಅತ್ಯಗತ್ಯ” ಎಂದು ನುಡಿದರು.

ಶಾಲಾ ಮುಖ್ಯ ಶಿಕ್ಷಕಿ  ಶೋಭಾ ನಾಗರಾಜ್ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಹಶಿಕ್ಷಕಿ ಅನಿತಾ ಕೃತಿಕಾರರನ್ನು ಪರಿಚಯಿಸಿದರು. ಸಹಶಿಕ್ಷಕಿ ಅಮೃತವಾಣಿ ವಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಅಕ್ಷರ ಕೆ ಸಿ, ಮಾನ್ವಿ ವಿಶ್ವನಾಥ,ಗ್ರೀಷ್ಮಾ ಡಿವಿಜಿ ರಚನೆಯ ವನಸುಮದೊಲೆನ್ನ ಪದ್ಯದ ಮೂಲಕ ಪ್ರಾರ್ಥನೆಯನ್ನು ನೆರವೇರಿಸಿದರು. .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

6 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

12 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

12 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago