Advertisement
ಸುದ್ದಿಗಳು

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |

Share

ಶಿಕ್ಷಕಿ ಕವಿತಾ ಅಡೂರು ಅವರು ಬರೆದ ‘ಎಲ್ಲರೊಳಗೊಂದಾಗು’ ಎಂಬ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು. ಈ ಪುಸ್ತಕದಲ್ಲಿ ಮಂಕು ತಿಮ್ಮನ ಕಗ್ಗದ ವ್ಯಾಖ್ಯಾನವುಳ್ಳ ಕಗ್ಗದ ಬೆಳಕು ಅಂಕಣ ಬರೆಹಗಳ ಸಂಗ್ರಹವಿದೆ.

ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಶಾಲೆಯ ಅಂಗ ಸಂಸ್ಥೆಯಾದ ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್‌ಮೆಂಟ್ ಸಂಸ್ಥೆಯ ಆಶ್ರಯದಲ್ಲಿ  ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು.  ಸುದಾನ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಡಾ ಪೀಟರ್ ವಿಲ್ಸನ್ ಪ್ರಭಾಕರ್ ಅವರು “ಬದುಕಿನ ನೋವು-ನಲಿವು ಸಮಸ್ಯೆಗಳಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ತಿಳಿಸುತ್ತಾ ನಮ್ಮೊಳ ಹೊಕ್ಕು ಪರಿಶೀಲಿಸಿಕೊಳ್ಳುವುದಕ್ಕೆ ಕಗ್ಗದ ಓದು ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯ ಪಟ್ಟರು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಫ್ರೊ ವಿ ಬಿ ಅರ್ತಿಕಜೆಯವರು ” ಈ ಪುಸ್ತಕದಲ್ಲಿ ಮಂಕುತಿಮ್ಮನ ಕಗ್ಗದ ಚೌಪದಿಗಳ ಧ್ವನ್ಯಾರ್ಥವನ್ನು ಗದ್ಯ ರೂಪದಲ್ಲಿ ಬರೆದಿರುವುದರಿಂದ ಸಾಮಾನ್ಯ ಜನರೂ ಕಗ್ಗದ ಆಶಯವನ್ನು ಅರ್ಥ ಮಾಡಿಕೊಳ್ಳುವ ಹಾಗಾಗಿದೆ. ಶ್ಲಾಘನೀಯ ಕಾರ್ಯ ಇದು ” ಎಂದು ನುಡಿದರು.

ಕೃತಿಕಾರರಾದ ಕವಿತಾ ಅಡೂರು ” ಮಂಕುತಿಮ್ಮನ ಕಗ್ಗವು ನೊಂದವರ ಬದುಕಿಗೆ ನೆಮ್ಮದಿಯನ್ನು ನೀಡಲಿ ಎಂಬ ಡಿವಿಜಿಯವರ ಆಶಯವು ಸಾಕಾರಗೊಳ್ಳಲಿ.” ಎಂದು ಹಾರೈಸಿದರು.

ಕೃತಿ ಸಮೀಕ್ಷೆಯನ್ನು ಮಾಡಿ ಮಾತನಾಡಿದ ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆಯವರು ” ಎಲ್ಲರೊಳಗೊಂದಾಗು ಎಂಬ ಈ ಪುಸ್ತಕದಲ್ಲಿ ಸಾಹಿತ್ಯ, ವಿಜ್ಞಾನ,ಸಾಮಾಜಿಕ ಬದುಕಿನ ಚಿತ್ರಣ,ವೇದಾಂತ ಮುಂತಾದವುಗಳಿವೆ. ಎಲ್ಲದಕ್ಕಿಂತಲೂ ಮುಖ್ಯವಾಗಿ ನೊಂದ ಮನಸ್ಸಿಗೆ ಸಾಂತ್ವನವಿದೆ, ಸಮಸ್ಯೆಗಳಿಗೆ ಪರಿಹಾರ ಇದೆ.” ಎಂದು ನುಡಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಹಿರಿಯ ವಿದ್ವಾಂಸರಾದ ಮಂಜುಳಗಿರಿ ವೆಂಕಟರಮಣ ಭಟ್ ರವರು “ತಮ್ಮ ಆಶ್ರಯದಲ್ಲಿರುವ ಉದ್ಯೋಗಿಯೊಬ್ಬರ ಪ್ರತಿಭೆಯನ್ನು ಗುರುತಿಸಿ ಪೋಷಿಸುವ, ಪ್ರೋತ್ಸಾಹಿಸುವ ಸುದಾನ ಸಂಸ್ಥೆಯ ಉದಾತ್ತಗುಣವು ಶ್ಲಾಘನೀಯ” ಎಂದು ನುಡಿದರು.

ವೇದಿಕೆಯಲ್ಲಿ‌ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ ರೆ ವಿಜಯ ಹಾರ್ವಿನ್ ರವರು “ಶಿಕ್ಷಕರು ಮಕ್ಕಳಿಗೆ ಆದರ್ಶವಾಗಬೇಕು, ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನೋವಿಕಾಸಕ್ಕೆ ಅತ್ಯಗತ್ಯ” ಎಂದು ನುಡಿದರು.

ಶಾಲಾ ಮುಖ್ಯ ಶಿಕ್ಷಕಿ  ಶೋಭಾ ನಾಗರಾಜ್ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಹಶಿಕ್ಷಕಿ ಅನಿತಾ ಕೃತಿಕಾರರನ್ನು ಪರಿಚಯಿಸಿದರು. ಸಹಶಿಕ್ಷಕಿ ಅಮೃತವಾಣಿ ವಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಅಕ್ಷರ ಕೆ ಸಿ, ಮಾನ್ವಿ ವಿಶ್ವನಾಥ,ಗ್ರೀಷ್ಮಾ ಡಿವಿಜಿ ರಚನೆಯ ವನಸುಮದೊಲೆನ್ನ ಪದ್ಯದ ಮೂಲಕ ಪ್ರಾರ್ಥನೆಯನ್ನು ನೆರವೇರಿಸಿದರು. .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

19 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

19 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago