Advertisement
ಸುದ್ದಿಗಳು

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |

Share

ಶಿಕ್ಷಕಿ ಕವಿತಾ ಅಡೂರು ಅವರು ಬರೆದ ‘ಎಲ್ಲರೊಳಗೊಂದಾಗು’ ಎಂಬ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು. ಈ ಪುಸ್ತಕದಲ್ಲಿ ಮಂಕು ತಿಮ್ಮನ ಕಗ್ಗದ ವ್ಯಾಖ್ಯಾನವುಳ್ಳ ಕಗ್ಗದ ಬೆಳಕು ಅಂಕಣ ಬರೆಹಗಳ ಸಂಗ್ರಹವಿದೆ.

ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಶಾಲೆಯ ಅಂಗ ಸಂಸ್ಥೆಯಾದ ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್‌ಮೆಂಟ್ ಸಂಸ್ಥೆಯ ಆಶ್ರಯದಲ್ಲಿ  ಲೋಕಾರ್ಪಣಾ ಕಾರ್ಯಕ್ರಮವು ನಡೆಯಿತು.  ಸುದಾನ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಡಾ ಪೀಟರ್ ವಿಲ್ಸನ್ ಪ್ರಭಾಕರ್ ಅವರು “ಬದುಕಿನ ನೋವು-ನಲಿವು ಸಮಸ್ಯೆಗಳಲ್ಲಿ ಅದನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ತಿಳಿಸುತ್ತಾ ನಮ್ಮೊಳ ಹೊಕ್ಕು ಪರಿಶೀಲಿಸಿಕೊಳ್ಳುವುದಕ್ಕೆ ಕಗ್ಗದ ಓದು ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯ ಪಟ್ಟರು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಫ್ರೊ ವಿ ಬಿ ಅರ್ತಿಕಜೆಯವರು ” ಈ ಪುಸ್ತಕದಲ್ಲಿ ಮಂಕುತಿಮ್ಮನ ಕಗ್ಗದ ಚೌಪದಿಗಳ ಧ್ವನ್ಯಾರ್ಥವನ್ನು ಗದ್ಯ ರೂಪದಲ್ಲಿ ಬರೆದಿರುವುದರಿಂದ ಸಾಮಾನ್ಯ ಜನರೂ ಕಗ್ಗದ ಆಶಯವನ್ನು ಅರ್ಥ ಮಾಡಿಕೊಳ್ಳುವ ಹಾಗಾಗಿದೆ. ಶ್ಲಾಘನೀಯ ಕಾರ್ಯ ಇದು ” ಎಂದು ನುಡಿದರು.

ಕೃತಿಕಾರರಾದ ಕವಿತಾ ಅಡೂರು ” ಮಂಕುತಿಮ್ಮನ ಕಗ್ಗವು ನೊಂದವರ ಬದುಕಿಗೆ ನೆಮ್ಮದಿಯನ್ನು ನೀಡಲಿ ಎಂಬ ಡಿವಿಜಿಯವರ ಆಶಯವು ಸಾಕಾರಗೊಳ್ಳಲಿ.” ಎಂದು ಹಾರೈಸಿದರು.

ಕೃತಿ ಸಮೀಕ್ಷೆಯನ್ನು ಮಾಡಿ ಮಾತನಾಡಿದ ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆಯವರು ” ಎಲ್ಲರೊಳಗೊಂದಾಗು ಎಂಬ ಈ ಪುಸ್ತಕದಲ್ಲಿ ಸಾಹಿತ್ಯ, ವಿಜ್ಞಾನ,ಸಾಮಾಜಿಕ ಬದುಕಿನ ಚಿತ್ರಣ,ವೇದಾಂತ ಮುಂತಾದವುಗಳಿವೆ. ಎಲ್ಲದಕ್ಕಿಂತಲೂ ಮುಖ್ಯವಾಗಿ ನೊಂದ ಮನಸ್ಸಿಗೆ ಸಾಂತ್ವನವಿದೆ, ಸಮಸ್ಯೆಗಳಿಗೆ ಪರಿಹಾರ ಇದೆ.” ಎಂದು ನುಡಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಹಿರಿಯ ವಿದ್ವಾಂಸರಾದ ಮಂಜುಳಗಿರಿ ವೆಂಕಟರಮಣ ಭಟ್ ರವರು “ತಮ್ಮ ಆಶ್ರಯದಲ್ಲಿರುವ ಉದ್ಯೋಗಿಯೊಬ್ಬರ ಪ್ರತಿಭೆಯನ್ನು ಗುರುತಿಸಿ ಪೋಷಿಸುವ, ಪ್ರೋತ್ಸಾಹಿಸುವ ಸುದಾನ ಸಂಸ್ಥೆಯ ಉದಾತ್ತಗುಣವು ಶ್ಲಾಘನೀಯ” ಎಂದು ನುಡಿದರು.

ವೇದಿಕೆಯಲ್ಲಿ‌ ಉಪಸ್ಥಿತರಿದ್ದ ಶಾಲಾ ಸಂಚಾಲಕರಾದ ರೆ ವಿಜಯ ಹಾರ್ವಿನ್ ರವರು “ಶಿಕ್ಷಕರು ಮಕ್ಕಳಿಗೆ ಆದರ್ಶವಾಗಬೇಕು, ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನೋವಿಕಾಸಕ್ಕೆ ಅತ್ಯಗತ್ಯ” ಎಂದು ನುಡಿದರು.

ಶಾಲಾ ಮುಖ್ಯ ಶಿಕ್ಷಕಿ  ಶೋಭಾ ನಾಗರಾಜ್ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಹಶಿಕ್ಷಕಿ ಅನಿತಾ ಕೃತಿಕಾರರನ್ನು ಪರಿಚಯಿಸಿದರು. ಸಹಶಿಕ್ಷಕಿ ಅಮೃತವಾಣಿ ವಂದಿಸಿದರು. ಶಾಲಾ ವಿದ್ಯಾರ್ಥಿಗಳಾದ ಅಕ್ಷರ ಕೆ ಸಿ, ಮಾನ್ವಿ ವಿಶ್ವನಾಥ,ಗ್ರೀಷ್ಮಾ ಡಿವಿಜಿ ರಚನೆಯ ವನಸುಮದೊಲೆನ್ನ ಪದ್ಯದ ಮೂಲಕ ಪ್ರಾರ್ಥನೆಯನ್ನು ನೆರವೇರಿಸಿದರು. .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago