ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜು ಸ್ಥಿತಿಗತಿ ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಸಚಿವರು, ಗ್ರಾಮಗಳಲ್ಲಿ ಸುಸ್ಥಿರ ಜಲ ಹಾಗೂ ಸುಸ್ಥಿರ ವಿದ್ಯುತ್ ಸರಬರಾಜು ಮಾಡುವ ಮಹತ್ತರ ಆಶಯವನ್ನು ಈ ಬಾರಿ ಕಾರ್ಯಗತಗೊಳಿಸಲು ಮೊದಲ ಹೆಜ್ಜೆ ಇರಿಸಲಾಗಿದ್ದು, ಗ್ರಾಮಗಳ ಸುಧಾರಣೆ, ಆರ್ಥಿಕ ಸುಸ್ಥಿರತೆಯ ಬಗ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು, ಪ್ರವಾಸಿ ಸ್ಥಳಗಳಲ್ಲಿನ ಗ್ರಾಮ ಪಂಚಾಯತಿ ಆಸ್ತಿಗಳನ್ನು ಆದಾಯ ಮೂಲ ಆಸ್ತಿಗಳನ್ನಾಗಿಸಬೇಕು ಎಂದು ಸಲಹೆ ನೀಡಿದರು.
ದೇಶದಲ್ಲಿನ ಪಂಚಾಯತ್ ಸಂಸ್ಥೆಗಳಲ್ಲಿ ಕರ್ನಾಟಕ ಅಳವಡಿಸಿಕೊಂಡಿರುವ ಪದ್ಧತಿಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಪ್ರಥಮ ಸ್ಥಾನ ನೀಡಿದೆ, ಈ ಬಾರಿ ಗ್ರಾಮ ಪಂಚಾಯತಿಗಳಲ್ಲಿ 1ಸಾವಿರದ 271 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವ ಮೂಲಕ ಅತಿ ಹೆಚ್ಚು ಕರಸಂಗ್ರಹಣೆಯ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಎರಡೂ ಸಾಧನೆಗಳಿಗೆ ಸಾರಥ್ಯವಹಿಸಿದ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರ್ಗಳು ಪಾಲ್ಗೊಂಡಿದ್ದರು.
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…