ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜು ಸ್ಥಿತಿಗತಿ ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಸಚಿವರು, ಗ್ರಾಮಗಳಲ್ಲಿ ಸುಸ್ಥಿರ ಜಲ ಹಾಗೂ ಸುಸ್ಥಿರ ವಿದ್ಯುತ್ ಸರಬರಾಜು ಮಾಡುವ ಮಹತ್ತರ ಆಶಯವನ್ನು ಈ ಬಾರಿ ಕಾರ್ಯಗತಗೊಳಿಸಲು ಮೊದಲ ಹೆಜ್ಜೆ ಇರಿಸಲಾಗಿದ್ದು, ಗ್ರಾಮಗಳ ಸುಧಾರಣೆ, ಆರ್ಥಿಕ ಸುಸ್ಥಿರತೆಯ ಬಗ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು, ಪ್ರವಾಸಿ ಸ್ಥಳಗಳಲ್ಲಿನ ಗ್ರಾಮ ಪಂಚಾಯತಿ ಆಸ್ತಿಗಳನ್ನು ಆದಾಯ ಮೂಲ ಆಸ್ತಿಗಳನ್ನಾಗಿಸಬೇಕು ಎಂದು ಸಲಹೆ ನೀಡಿದರು.
ದೇಶದಲ್ಲಿನ ಪಂಚಾಯತ್ ಸಂಸ್ಥೆಗಳಲ್ಲಿ ಕರ್ನಾಟಕ ಅಳವಡಿಸಿಕೊಂಡಿರುವ ಪದ್ಧತಿಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಪ್ರಥಮ ಸ್ಥಾನ ನೀಡಿದೆ, ಈ ಬಾರಿ ಗ್ರಾಮ ಪಂಚಾಯತಿಗಳಲ್ಲಿ 1ಸಾವಿರದ 271 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವ ಮೂಲಕ ಅತಿ ಹೆಚ್ಚು ಕರಸಂಗ್ರಹಣೆಯ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಎರಡೂ ಸಾಧನೆಗಳಿಗೆ ಸಾರಥ್ಯವಹಿಸಿದ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರ್ಗಳು ಪಾಲ್ಗೊಂಡಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…