ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜು ಸ್ಥಿತಿಗತಿ ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಸಚಿವರು, ಗ್ರಾಮಗಳಲ್ಲಿ ಸುಸ್ಥಿರ ಜಲ ಹಾಗೂ ಸುಸ್ಥಿರ ವಿದ್ಯುತ್ ಸರಬರಾಜು ಮಾಡುವ ಮಹತ್ತರ ಆಶಯವನ್ನು ಈ ಬಾರಿ ಕಾರ್ಯಗತಗೊಳಿಸಲು ಮೊದಲ ಹೆಜ್ಜೆ ಇರಿಸಲಾಗಿದ್ದು, ಗ್ರಾಮಗಳ ಸುಧಾರಣೆ, ಆರ್ಥಿಕ ಸುಸ್ಥಿರತೆಯ ಬಗ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು, ಪ್ರವಾಸಿ ಸ್ಥಳಗಳಲ್ಲಿನ ಗ್ರಾಮ ಪಂಚಾಯತಿ ಆಸ್ತಿಗಳನ್ನು ಆದಾಯ ಮೂಲ ಆಸ್ತಿಗಳನ್ನಾಗಿಸಬೇಕು ಎಂದು ಸಲಹೆ ನೀಡಿದರು.
ದೇಶದಲ್ಲಿನ ಪಂಚಾಯತ್ ಸಂಸ್ಥೆಗಳಲ್ಲಿ ಕರ್ನಾಟಕ ಅಳವಡಿಸಿಕೊಂಡಿರುವ ಪದ್ಧತಿಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಪ್ರಥಮ ಸ್ಥಾನ ನೀಡಿದೆ, ಈ ಬಾರಿ ಗ್ರಾಮ ಪಂಚಾಯತಿಗಳಲ್ಲಿ 1ಸಾವಿರದ 271 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವ ಮೂಲಕ ಅತಿ ಹೆಚ್ಚು ಕರಸಂಗ್ರಹಣೆಯ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಎರಡೂ ಸಾಧನೆಗಳಿಗೆ ಸಾರಥ್ಯವಹಿಸಿದ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರ್ಗಳು ಪಾಲ್ಗೊಂಡಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…