ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳರಲಿರುವ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಇವರ ಕಂಚಿನ ಪ್ರತಿಮೆಯ ಮೆರವಣಿಗೆ ಸೋಮವಾರ ಕೊಡಗು ಸಂಪಾಜೆ ಗ್ರಾಮದ ಚೆಕ್ ಪೋಸ್ಟ್ ಬಳಿ ಸ್ವಾಗತಿಸಲಾಯಿತು.
ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1857 ರಲ್ಲಿ ಎಂದು ಉಲ್ಲೇಖಿಸಲಾಗಿದ್ದರೂ ಅದಕ್ಕೂ 20 ವರ್ಷ ಮೊದಲೇ ಬ್ರಿಟಿಷರ ದಾಸ್ಯದ ಪದ್ಧತಿಯನ್ನು ವಿರೋಧಿಸಿ, ದೇಶದಲ್ಲೇ ಮೊದಲ ಸ್ವಾತಂತ್ರ್ಯದ ರಣ ಕಹಳೆ ಮೊಳಗಿಸಿದ್ದ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸುಳ್ಯದ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯನ್ನು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಪ್ರತಿಷ್ಠಾಪಿಸಲು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯು ಸರ್ಕಾರಕ್ಕೆ ಮನವಿ ಮಾಡಿಕೊಂಡ ಮೇರೆಗೆ ಸರ್ಕಾರದಿಂದ ಅನುಮೋದನೆ ದೊರೆತಿದ್ದು ಇದೀಗ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪುತ್ಥಳಿಯ ಅದ್ದೂರಿ ಮೆರವಣಿಗೆ ನಡೆಯಿತು. ಈ ಪುತ್ಥಳಿ ಆಂಧ್ರಪ್ರದೇಶದ ವಿಜಯವಾಡದಲ್ಲಿ ಕಂಚಿನಿಂದ ತಯಾರಾಗಿದ್ದು ಇದರ ಎತ್ತರ ಸುಮಾರು 11 ಅಡಿ ಇದ್ದು ಚಿನ್ನದ ಬಣ್ಣದಿಂದ ಕೂಡಿದೆ. ಸಕಲ ಕಾರ್ಯಕ್ರಮಗಳ ಬಳಿಕ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಅನಾವರಣಗೊಳ್ಳಲಿದೆ.ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…