ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ

May 2, 2025
9:13 PM

ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ ಮತ್ತು ವಿಶೇಷ ಆಚರಣೆಗಳ ನಡುವೆ ಕೇದಾರನಾಥ ಧಾಮದ ದ್ವಾರಗಳನ್ನು ಭಕ್ತರಿಗಾಗಿ ತೆರೆಯಲಾಯಿತು. ಈ ದೈವಿಕ ಕ್ಷಣಕ್ಕೆ ಸಾಕ್ಷಿಯಾಗಲು ಭಾರತ ಮತ್ತು ವಿದೇಶಗಳಿಂದ ಸಾವಿರಾರು ಯಾತ್ರಾರ್ಥಿಗಳು ಜಮಾಯಿಸಿದರು. ಕೇದಾರನಾಥದ ಪವಿತ್ರ ಕಣಿವೆಯು ಭಕ್ತಿ, ನಂಬಿಕೆ ಮತ್ತು ಸಂಭ್ರಮದಿಂದ ಜೀವಂತವಾಗುತ್ತಿದ್ದಂತೆ ಗಾಳಿಯು ಆಧ್ಯಾತ್ಮಿಕ ಉತ್ಸಾಹದಿಂದ ಪ್ರತಿಧ್ವನಿಸಿತು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಪರ್ ಸಿಂಗ್ ಧಾಮಿ, ಯಾತ್ರಾರ್ಥಿಗಳ ಸುಗಮ ಯಾತ್ರೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಕೇದಾರನಾಥ ಧಾಮದ ಬಾಗಿಲು ತೆರೆದ ತಕ್ಷಣ, ಭಕ್ತರು ದೇವಾಲಯದ ಇರುವ ದೀಪವನ್ನು ವೀಕ್ಷಿಸಿದರು.  ಬಳಿಕ ರುದ್ರಾಭಿಷೇಕ, ಶಿವಾಷ್ಟಕ, ಶಿವ ತಾಂಡವ ಸ್ತೋತ್ರ, ಕೇದಾರಾಷ್ಟಕ ಮಂತ್ರಗಳನ್ನು ಮೂಲಕ ಪೂಜೆ ನಡೆಯಿತು. ಈ ಬಾರಿ ದೇವಾಲಯವನ್ನು ಮೊದಲು ತಲುಪಿದವರು ಕರ್ನಾಟಕದ ವೀರಶೈವ ಲಿಂಗಾಯತ ಸಮುದಾಯದ ಮುಖ್ಯಸ್ಥ ರಾವಲ್ ಭೀಮಾಶಂಕರ್.

ದೇವಾಲಯವನ್ನು 54 ವಿಧದ 108 ಕ್ವಿಂಟಾಲ್ ಹೂವುಗಳಿಂದ ಅಲಂಕರಿಸಲಾಗಿದೆ. ಇದರಲ್ಲಿ ನೇಪಾಳ, ಥೈಲ್ಯಾಂಡ್ ಮತ್ತು ಶ್ರೀಲಂಕಾದಂತಹ ವಿವಿಧ ದೇಶಗಳಿಂದ ತಂದ ಗುಲಾಬಿಗಳು ಮತ್ತು ಚೆಂಡು ಹೂಗಳು ಸೇರಿವೆ. ಮೊದಲ ದಿನ ಸುಮಾರು 10 ಸಾವಿರ ಜನರು ದರ್ಶನಕ್ಕೆ ಆಗಮಿಸಿದ್ದರು. ಜನಸಂದಣಿಯನ್ನು ನಿಯಂತ್ರಿಸಲು, ಟೋಕನ್ ವ್ಯವಸ್ಥೆಯ ಮೂಲಕ ದರ್ಶನ ನೀಡಲಾಗುತ್ತಿದೆ. ಮುಂದಿನ 6 ತಿಂಗಳ ಕಾಲ ಭಕ್ತರು ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಜೂನ್ ಮತ್ತು ಆಗಸ್ಟ್ ನಡುವೆ ಹವಾಮಾನವು ಉತ್ತಮವಾಗಿದ್ದರೆ, ಈ ಬಾರಿ 25 ಲಕ್ಷಕ್ಕೂ ಹೆಚ್ಚು ಜನರು ಕೇದಾರನಾಥ ಧಾಮಕ್ಕೆ ಬರುವ ನಿರೀಕ್ಷೆಯಿದೆ.

ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು‌ ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror