ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ

May 2, 2025
9:13 PM

ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ ಮತ್ತು ವಿಶೇಷ ಆಚರಣೆಗಳ ನಡುವೆ ಕೇದಾರನಾಥ ಧಾಮದ ದ್ವಾರಗಳನ್ನು ಭಕ್ತರಿಗಾಗಿ ತೆರೆಯಲಾಯಿತು. ಈ ದೈವಿಕ ಕ್ಷಣಕ್ಕೆ ಸಾಕ್ಷಿಯಾಗಲು ಭಾರತ ಮತ್ತು ವಿದೇಶಗಳಿಂದ ಸಾವಿರಾರು ಯಾತ್ರಾರ್ಥಿಗಳು ಜಮಾಯಿಸಿದರು. ಕೇದಾರನಾಥದ ಪವಿತ್ರ ಕಣಿವೆಯು ಭಕ್ತಿ, ನಂಬಿಕೆ ಮತ್ತು ಸಂಭ್ರಮದಿಂದ ಜೀವಂತವಾಗುತ್ತಿದ್ದಂತೆ ಗಾಳಿಯು ಆಧ್ಯಾತ್ಮಿಕ ಉತ್ಸಾಹದಿಂದ ಪ್ರತಿಧ್ವನಿಸಿತು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಪರ್ ಸಿಂಗ್ ಧಾಮಿ, ಯಾತ್ರಾರ್ಥಿಗಳ ಸುಗಮ ಯಾತ್ರೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

Advertisement
Advertisement

ಕೇದಾರನಾಥ ಧಾಮದ ಬಾಗಿಲು ತೆರೆದ ತಕ್ಷಣ, ಭಕ್ತರು ದೇವಾಲಯದ ಇರುವ ದೀಪವನ್ನು ವೀಕ್ಷಿಸಿದರು.  ಬಳಿಕ ರುದ್ರಾಭಿಷೇಕ, ಶಿವಾಷ್ಟಕ, ಶಿವ ತಾಂಡವ ಸ್ತೋತ್ರ, ಕೇದಾರಾಷ್ಟಕ ಮಂತ್ರಗಳನ್ನು ಮೂಲಕ ಪೂಜೆ ನಡೆಯಿತು. ಈ ಬಾರಿ ದೇವಾಲಯವನ್ನು ಮೊದಲು ತಲುಪಿದವರು ಕರ್ನಾಟಕದ ವೀರಶೈವ ಲಿಂಗಾಯತ ಸಮುದಾಯದ ಮುಖ್ಯಸ್ಥ ರಾವಲ್ ಭೀಮಾಶಂಕರ್.

ದೇವಾಲಯವನ್ನು 54 ವಿಧದ 108 ಕ್ವಿಂಟಾಲ್ ಹೂವುಗಳಿಂದ ಅಲಂಕರಿಸಲಾಗಿದೆ. ಇದರಲ್ಲಿ ನೇಪಾಳ, ಥೈಲ್ಯಾಂಡ್ ಮತ್ತು ಶ್ರೀಲಂಕಾದಂತಹ ವಿವಿಧ ದೇಶಗಳಿಂದ ತಂದ ಗುಲಾಬಿಗಳು ಮತ್ತು ಚೆಂಡು ಹೂಗಳು ಸೇರಿವೆ. ಮೊದಲ ದಿನ ಸುಮಾರು 10 ಸಾವಿರ ಜನರು ದರ್ಶನಕ್ಕೆ ಆಗಮಿಸಿದ್ದರು. ಜನಸಂದಣಿಯನ್ನು ನಿಯಂತ್ರಿಸಲು, ಟೋಕನ್ ವ್ಯವಸ್ಥೆಯ ಮೂಲಕ ದರ್ಶನ ನೀಡಲಾಗುತ್ತಿದೆ. ಮುಂದಿನ 6 ತಿಂಗಳ ಕಾಲ ಭಕ್ತರು ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಜೂನ್ ಮತ್ತು ಆಗಸ್ಟ್ ನಡುವೆ ಹವಾಮಾನವು ಉತ್ತಮವಾಗಿದ್ದರೆ, ಈ ಬಾರಿ 25 ಲಕ್ಷಕ್ಕೂ ಹೆಚ್ಚು ಜನರು ಕೇದಾರನಾಥ ಧಾಮಕ್ಕೆ ಬರುವ ನಿರೀಕ್ಷೆಯಿದೆ.

ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು‌ ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group