ದೇವಸ್ಥಾನದ ಆವರಣದೊಳಗೆ ವ್ಯಕ್ತಿಯೊಬ್ಬ ಸಾಕು ನಾಯಿಯನ್ನು ಕರೆದುಕೊಂಡು ಹೋಗಿ ವಿಗ್ರಹಕ್ಕೆ ನಾಯಿಯನ್ನು ಸ್ಪರ್ಶಿಸಿ ಪ್ರಾರ್ಥನೆ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿಯ ಬಂಧನಕ್ಕೆ ಹುಡುಕಾಟ ನಡೆಸಲಾಗುತ್ತಿದೆ.
ರುದ್ರಪ್ರಯಾಗ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ಅಗರ್ವಾಲ್ ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಯ ದೂರಿನ ಮೇರೆಗೆ, ದೇವಾಲಯದ ಆವರಣದಲ್ಲಿ ನಾಯಿಯೊಂದಿಗೆ ತಿರುಗಾಡುತ್ತಿದ್ದ ಮತ್ತು ನಾಯಿಯೊಂದಿಗೆ ನಂದಿ ದೇವರ ವಿಗ್ರಹವನ್ನು ಸ್ಪರ್ಶಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಗರ್ವಾಲ್ ಹೇಳಿದರು. ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಯ ಅಧ್ಯಕ್ಷ ಅಜೇಂದ್ರ ಅಜಯ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊವನ್ನು ಗಮನಿಸಿ ದೂರು ನೀಡಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ದೇಗುಲ ಸಮಿತಿ ಅಧ್ಯಕ್ಷ ಅಜೇಂದ್ರ ಅವರು ದೇವಸ್ಥಾನ ಸಮಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಇಂತಹ ಅನಗತ್ಯ ಚಟುವಟಿಕೆಗಳನ್ನು ನಿಲ್ಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…