ಭಾರತದಲ್ಲಿ ವ್ಯವಸಾಯ ಪದ್ಧತಿಯು ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿರುವ ಮಾನವನ ಪುರಾತನ ವೃತ್ತಿ ಮತ್ತು ಪ್ರಮುಖ ಪ್ರಾಥಮಿಕ ಚಟುವಟಿಕೆಯಾಗಿದೆ. ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಈ ಕೆಳಗಿನ ಅಂಶಗಳಿಂದ ವ್ಯವಸಾಯದ ಮಹತ್ವಗಳು ಮತ್ತು ಅವುಗಳ ಪ್ರಭಾವಗಳನ್ನು ಕಾಣಬಹುದು. ಭಾರತದಲ್ಲಿ ಕೃಷಿಯು ಜನರ ಪ್ರಮುಖ ವೃತ್ತಿಯಾಗಿದೆ. ಸುಮಾರು ಶೇ. 70 ಕ್ಕೂ ಹೆಚ್ಚು ಜನರು ತಮ್ಮ ಜೀವನೋಪಾಯಕ್ಕಾಗಿ ಪ್ರತ್ಯೇಕ್ಷವಾಗಿ ಮತ್ತು ಪರೋಕ್ಷವಾಗಿ ವ್ಯವಸಾಯವನ್ನೇ ಅವಲಂಬಿಸಿದ್ದಾರೆ.
ವ್ಯವಸಾಯವು ಜನರಿಗೆ ಅಗತ್ಯವಾದ ಆಹಾರ ಧಾನ್ಯಗಳು, ಹಣ್ಣು, ತರಕಾರಿ, ಸಾಂಬಾರು ಪಾದಾರ್ಧ ಹಾಗೂ ಸಾಕು ಪ್ರಾಣಿಗಳಿಗೆ ಮೇವನ್ನು ಪೂರೈಸುವುದು. ಉದ್ಯೋಗವನ್ನು ಒದಗಿಸುವಲ್ಲಿ ಕೃಷಿಯು ಒಂದು ದೊಡ್ಡ ಉದ್ಯಮವಾಗಿದ್ದು ಹೆಚ್ಚು ಉದ್ಯೋಗಾವಕಾಶವನ್ನು ಕಲ್ಪಿಸುತ್ತದೆ. ರಾಷ್ಟ್ರೀಯ ಆದಾಯದ ಮೇಲೆ ಕೃಷಿಯು ಮಹತ್ವದ ಪಾತ್ರ ವಹಿಸುತ್ತದೆ. ಕೃಷಿಯು ಅನೇಕ ಕೈಗಾರಿಕೆಗಳಿಗೆ ಕಚ್ಚಾ ವಸ್ತುಗಳನ್ನು ಪೂರೈಸುತ್ತದೆ. ಅಂತಹ ಕೈಗಾರಿಕೆಗಳಿಗೆ ಕೃಷಿ ಆಧಾರಿತ ಕೈಗಾರಿಕೆಗಳುಎನ್ನುವರು. ಹತ್ತಿ, ಸಕ್ಕರೆ, ಸೆಣಬಿನ ಕೈಗಾರಿಕೆ ಮುಂತಾದವು. ಭಾರತದಲ್ಲಿ ಅನೇಕ ವ್ಯವಸಾಯ ಉತ್ಪನ್ನಗಳನ್ನು ಉತ್ಪಾದಿಸಲಾಗುತ್ತಿದೆ. ಅವುಗಳಲ್ಲಿ ಕೆಲವನ್ನು ರಫ್ತು ಮಾಡಲಾಗುತ್ತಿದೆ. ಅವು ಚಹಾ, ಕಾಫಿ, ಸೆಣಬು, ಹೊಗೆಸೊಪ್ಪು, ಸಕ್ಕರೆ, ಸಾಂಬಾರ ಪಾದಾರ್ಥ ಮುಂತಾದವು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಅತಿ ಹೆಚ್ಚು ಪ್ರಮಾಣದ ಕಂದಾಯವನ್ನು ವ್ಯವಸಾಯವು ಒದಗಿಸುತ್ತದೆ. ಆದರೆ, ಭಾರತದ ವ್ಯವಸಾಯವು ಹೆಚ್ಚಾಗಿ ಮ್ಯಾನ್ಸನ್ ಮಳೆಯನ್ನು ಅವಲಂಬಿಸಿದೆ. ಹೀಗಾಗಿ ” ಭಾರತದ ಬಜೆಟ್ ಮುಂಗಾರಿನ ಜೊತೆ ಜೂಜಾಟ” ವಾಗಿ ಪರಿಗಣಿಸಿದೆ. ಸಾರಿಗೆ ಮತ್ತು ಸಂಪರ್ಕ, ಬ್ಯಾಂಕು, ವಿಮೆ, ಮುಂತಾದವುಗಳ ಅಭಿವೃದ್ಧಿಗೆ ವ್ಯವಸಾಯವು ಹೆಚ್ಚು ಸಹಾಯಕವಾಗಿರುವುದು. ಭಾರತದಲ್ಲಿ ವ್ಯವಸಾಯ ಉತ್ಪನ್ನವು ಒಂದು ಪ್ರದೇಶದಿಂದ ಇನ್ನೊಂದಕ್ಕೆ ವ್ಯತ್ಯಾಸವಾಗಿರುತ್ತದೆ. ಹೆಚ್ಚು ಉತ್ಪಾದಿಸುವ ಪ್ರದೇಶಗಳಿಂದ ಕೊರತೆ ಇರುವ ಪ್ರದೇಶಗಳಿಗೆ ವ್ಯವಸಾಯ ಉತ್ಪನ್ನಗಳನ್ನು ಆಂತರಿಕ ವ್ಯಾಪಾರದ ಮೂಲಕ ಸರಬರಾಜು ಮಾಡಲಾಗುತ್ತದೆ. ಉದಾ – ಹತ್ತಿ, ಸೆಣಬು, ಚಹಾ, ಕಾಫಿ ಮುಂತಾದವು. ದೇಶದ ರಾಜಕೀಯ ಮತ್ತು ಸಾಮಾಜಿಕ ಪರಿಸ್ಥಿತಿಯು ಹೆಚ್ಚಾಗಿ ಉತ್ಪಾದಕರು ಹಾಗೂ ಕೃಷಿಕರಿಂದ ನಿರ್ಧರಿಸಲ್ಪಡುವುದು.
ವ್ಯವಸಾಯ ಮಾಡುವಾಗ ವಹಿಸಬೇಕಾದ ಕ್ರಮಗಳು:
– ಅಂತರ್ಜಾಲ ಮಾಹಿತಿ
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…