Advertisement
ಸುದ್ದಿಗಳು

ಪೇರಳೆ ಹಣ್ಣನ್ನು ಆಯ್ಕೆ ಮಾಡುವಾಗ ಈ ಟಿಪ್ಸ್ ನೋಡಿಕೊಳ್ಳಿ

Share
ಮೊದಲೆಲ್ಲ ಪ್ರತಿಯೊಂದು ಮನೆಯಲ್ಲೂ ಪೇರಳೆ ಮರ ಇರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಾರುಕಟ್ಟೆಯಿಂದ ಎಲ್ಲವನ್ನೂ ತರುತ್ತಾರೆ. ಆದರಲ್ಲೂ ಬಾಳೆಎಲೆ ಸಹ ಈಗ ಮಾರುಕಟ್ಟೆಯಲ್ಲೇ ಸಿಗುತ್ತದೆ. ಆತರ ಕಾಲ ಬದಲಾವಣೆ ಹೊಂದಿದೆ. ಈಗ ಮಾರುಕಟ್ಟೆಯಲ್ಲಿ ಪೇರಳೆ ಹಣ್ಣಿನದೇ ಕಾರುಬಾರು ಅಂದರೆ ತಪ್ಪಾಗಲಾರದು.
ಈ ಪೇರಳೆ ಹಣ್ಣು ಹೊರಗೆ ಸುಂದರವಾಗಿ ಕಾಣುವ ಪ್ರತಿಯೊಂದು ಹಣ್ಣು ಒಳಗೆ ಸಿಹಿಯಾಗಿರುವುದಿಲ್ಲ. ಕೆಲವು ಹೊರಗೆ ಸಿಹಿಯಾಗಿರುವಂತೆ ಕಂಡರೂ ಆದರೆ ಒಳಗೆ ಹುಳಿಯಾಗಿರುತ್ತದೆ. ಹೀಗಾಗಿ ಉತ್ತಮ ಸಿಹಿಯಾದ ಪೇರಳೆ ಹಣ್ಣುಗಳನ್ನು ಆಯ್ಕೆ ಮಾಡಲು ಕೆಲವೊಂದು ಟಿಪ್ಸ್ ಗಳು ಇಲ್ಲಿದೆ:
  • ಸಿಪ್ಪೆಯ ಲಕ್ಷಣಗಳು: ಉತ್ತಮ ಪೇರಳೆಯೂ ನಯವಾದ, ಹೊಳೆಯುವ ಸಿಪ್ಪೆನ್ನು ಹೊಂಇರಬೇಕು. ಹಣ್ಣಿನ ಮೇಲೆ ಅನೇಕ ಕಪ್ಪು ಕಲೆಗಳು, ಸುಕ್ಕುಗಳ ಇಲ್ಲದೆ ಇರುವುದನ್ನು ಗಮನಿಸಬೇಕು.
  • ಕೈಯಲ್ಲಿ ಹಿಡಿದು ಪರೀಕ್ಷಿಸುವುದು: ಹಣ್ಣು ತುಂಬ ಮೃದುವಾಗಿದ್ದರೆ, ವಾಸನೆ ಬರುತ್ತಿದ್ದರೆ ಅದು ಕೊಳೆತು ಹೋಗಿದೆ. ಒಂದು ವೇಳೆ ನೀವು ಕೈಯಲ್ಲಿ ಒತ್ತಿದ ಸ್ವಲ್ಪ ಸಮಯದ ನಂತರ ಮೃದುವಾದ ಅನುಭ ನೀಡಿದರೆ ಅದು ಸಿಹಿ ಮತ್ತು ರುಚಿಕರವಾದ ಪೇರಳೆಯಾಗಿದೆ.
  • ತೂಕ ಮತ್ತು ಗಾತ್ರ: ಉತ್ತಮವಾದ ಪೇರಳೆಯು ಸಾಮಾನ್ಯವಾಗಿ ಅದರ ಗಾತ್ರಕ್ಕೆ ಸೂಕ್ತವಾದ ತೂಕವನ್ನು ಹೊಂದಿರುತ್ತದೆ. ಒಂದೇ ಗಾತ್ರದ ಎರಡು ಹಣ್ಣುಗಳನ್ನು ಹೋಲಿಸಿದಾಗ, ಭಾರವಾದದ್ದು ಹೆಚ್ಚು ತಿರುಳು ಮತ್ತು ರಸವನ್ನು ಹೊಂದಿರುತ್ತದೆ ಮತ್ತು ಸಿಹಿಯಾಗಿರುತ್ತದೆ. ಹಗುರವಾದ ಹಣ್ಣುಗಳು ಒಳಗೆ ಒಣಗಬಹುದು ಅಥವಾ ಹೆಚ್ಚು ಬೀಜಗಳನ್ನು ಹೊಂದಿರಬಹುದು ಮತ್ತು ಅಷ್ಟು ರುಚಿಯಾಗಿಲ್ಲದೇ ಇರಬಹುದು.
  • ಸಿಹಿ ಪರಿಮಳ: ಒಳ್ಳೆ ಪೇರಳೆಯೂ ಸಿಹಿ ಪರಿಮಳವನ್ನು ನೀಡುತ್ತದೆ. ವಾಸನೆ ಬರುತ್ತಿದ್ದರೆ ಅದು ಕೆಟ್ಟಿದೆ ಎಂದು ತಿಳಿದು ಕೊಳ್ಳಿ.
  • ಬಣ್ಣದಿಂದ ಗುರುತಿಸುವಿಕೆ: ಪೇರಳೆ ಹಣ್ಣು ತೂಂಬಾ ಕಡು ಹಸಿರು ಬಣ್ಣದ್ದಾಗಿದ್ದರೆ, ಅದು ಇನ್ನೂ ಕಾಯಿ ಆಗಿದೆ ಎಂದರ್ಥ. ಅವು ಗಟ್ಟಿಯಾಗಿರುತ್ತದೆ. ಮತ್ತು ತಿನ್ನಲು ಸ್ವಲ್ಪ ಕುರುಕಲು ಆಗಿರುತ್ತದೆ. ಹಣ್ಣು ಸಿಹಿಯಾಗಿರಲು ತಿಳಿ ಹಸಿರು ಅಥವಾ ಸ್ವಲ್ಪ ಹಳದಿ ಬಣ್ಣಕ್ಕೆ ತಿರುಗಲೇಬೇಕು. ಇದು ಸರಿಯಾದ ಪಕ್ವತೆಯ ಸಂಕೇತವಾಗಿದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

6 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

13 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

20 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

20 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

20 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

20 hours ago