ಚಳಿಗಾಲದಲ್ಲಿ ಬಿಸಿಬಿಸಿ ಕಡಲೆಕಾಯಿ ತಿನ್ನುವುದೇ ಖುಷಿ. ಕಡಲೆಕಾಯಿ ತಿನ್ನುವಾಗ ಹೆಚ್ಚಿನ ಜನರು ಅದರ ಮೇಲಿನ ಕೆಂಪು ಸಿಪ್ಪೆಯನ್ನು ತೆಗೆದುತಿನ್ನುತ್ತಾರೆ. ಆದರೆ, ಈ ಸಿಪ್ಪೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಅಂಶಗಳಿವೆ ಎಂಬುದು ಎಷ್ಟೋ ಜನರಿಗೆ ಗೊತ್ತಿರುವುದೇ ಇಲ್ಲ. ಒಂದು ವೇಳೆ ಇದರ ಪ್ರಯೋಜನಗಳನ್ನು ತಿಳಿದುಕೊಂಡರೆ ಯಾವುದೇ ಕಾರಣಕ್ಕೂ ಕಸವೆಂದು ಎಸೆಯುವುದೇ ಇಲ್ಲ. ಇನ್ನು ಈ ಕೆಂಪು ಸಿಪ್ಪೆಯ ಪ್ರಯೋಜನಗಳು ಏನೆಂದು ನೋಡಿದರೆ:
• ಈ ಸಿಪ್ಪೆಯು ಒಂದು ಸಣ್ಣ ಪೌಷ್ಟಿಕಾಂಶದ ನಿಧಿಯಂತೆ ಇರುತ್ತದೆ. ಇದರಲ್ಲಿ ಫೈಬರ್, ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಇ, ವಿಟಮಿನ್ ಬಿ6 ಮತ್ತು ದೇಹಕ್ಕೆ ಅಗತ್ಯವಾದ ಖನಿಜಗಳು ಸಮೃದ್ಧವಾಗಿದೆ.
• ಈ ಕೆಂಪು ಸಿಪ್ಪೆಯಲ್ಲಿರುವ ಪಾಲಿಫಿನಾಲ್ ಗಳು ಮತ್ತು ಫ್ಲೇವನಾಯ್ಡ್ ಗಳು ದೇಹದಲ್ಲಿನ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡುತ್ತವೆ ಮತ್ತು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತವೆ.
• ಇದು ವಯಸ್ಸಾಗುವಿಕೆಯ ಪರಿಣಾಮಗಳನ್ನು ಕಡಿಮೆ ಮಾಡುವುದಲ್ಲದೇ, ರೋಗನೀರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
• ಮಲಬದ್ಧತೆಯ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಡುತ್ತದೆ.
• ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಏರಿಕೆಯಾಗುವುದಿಲ್ಲ. ಹೀಗಾಗಿ ಮಧುಮೇಹಿಗಳಿಗೂ ಸುರಕ್ಷಿತ.
• ಕೆಂಪು ಸಿಪ್ಪೆಯೊಂದಗೆ ಕಡಲಡಕಾಯಿಯನ್ನು ನೆನೆಸಿಟ್ಟು ತಿನ್ನುವುದರಿಂದ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…