ಕೇರಳ ಕೃಷಿ ಇಲಾಖೆಯು ಬೆಳೆ ವಿಮಾ ಯೋಜನೆಯನ್ನು ಮಾರ್ಪಡು ಮಾಡಿದ್ದು ರೈತರು ಸಾವನ್ನಪ್ಪಿದ ಸಂದರ್ಭದಲ್ಲಿ ಅಥವಾ ಪಾರ್ಶ್ವವಾಯು ಮತ್ತು ಹಾಸಿಗೆ ಹಿಡಿದರೆ ಬೆಳೆ ನಷ್ಟ ಪರಿಹಾರವನ್ನು ನಾಮನಿರ್ದೇಶಿತರಿಗೆ ಸಂಗ್ರಹಿಸಲು ಅನುವು ಮಾಡುವಂತೆ ವ್ಯವಸ್ಥೆ ಮಾಡಿದೆ.
ಬೆಳೆ ವಿಮಾ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ರೈತರು ತಮ್ಮ ನಾಮಿನಿಗಳನ್ನು ಸೂಚಿಸಬೇಕು ಎಂದು ಇಲಾಖೆಯು ಸೆ.24 ರ ಆದೇಶದಲ್ಲಿ ಯೋಜನೆಯ ಮಾರ್ಗಸೂಚಿಗಳಿಗೆ ಮಾರ್ಪಾಡುಗಳನ್ನು ಪಟ್ಟಿ ಮಾಡಿದೆ. ಹೀಗಾಗಿ ಅನಿವಾರ್ಯ ಸಂದರ್ಭಗಳಲ್ಲಿ ರೈತರ ನಾಮಿನಿಯು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ನಿಬಂಧನೆಯು ಬೇರೆ ಯಾವುದೇ ಪರಿಸ್ಥಿತಿಯಲ್ಲಿ ಅನ್ವಯಿಸುವುದಿಲ್ಲ ಎಂದು ಕೃಷಿ ಇಲಾಖೆ ತಿಳಿಸಿದೆ.
ಈ ವರ್ಷದ ಜನವರಿ ಮತ್ತು ಜೂನ್ನಲ್ಲಿ ಕೃಷಿ ನಿರ್ದೇಶಕರು ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ಮಾರ್ಪಾಡುಗಳನ್ನು ಮಾಡಲಾಗಿದೆ. 2017 ರಲ್ಲಿ, ರಾಜ್ಯ ಸರ್ಕಾರವು ಪ್ರಮುಖ ಬೆಳೆಗಳಿಗೂ ಬೆಳೆ ವಿಮಾ ಯೋಜನೆಯನ್ನು ವಿಸ್ತರಿಸಿ ವಿಮಾ ಯೋಜನೆಯ ನಿಯಮವನ್ನು ರಚಿಸಿತ್ತು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…