Advertisement
The Rural Mirror ವಾರದ ವಿಶೇಷ

ಪರಿಸರ ಕಾಳಜಿ | ಕೃಷಿಯಲ್ಲಿ ಪ್ಲಾಸ್ಟಿಕ್ ಗ್ರೋ ಬ್ಯಾಗ್ ಬೇಡ ಎಂದ ಕೇರಳ ಕೃಷಿ ಇಲಾಖೆ |

Share

ದೇಶದಾದ್ಯಂತ ಪರಿಸರ ಕಾಳಜಿಯ ಕಡೆಗೆ ಹೆಚ್ಚು ಗಮನ ಹರಿಸಲಾಗುತ್ತಿದೆ. ಎಲ್ಲೆಡೆಯೂ ಪ್ಲಾಸ್ಟಿಕ್‌ ತುಂಬಿಕೊಳ್ಳುತ್ತಿದೆ. ಒಂದೇ ಬಾರಿ ಬಳಕೆ ಮಾಡುವ ಪ್ಲಾಸ್ಟಿಕ್‌ ನಿಷೇಧವಾದರೂ ಅಲ್ಲಲ್ಲಿ ಕಾಣುತ್ತಿದೆ. ಕೃಷಿಯಲ್ಲೂ ಹಲವು ಸಂದರ್ಭ ಪ್ಲಾಸ್ಟಿಕ್‌ ಬಳಕೆಯಾಗುತ್ತದೆ. ಇದೀಗ ಕೇರಳದ ಕೃಷಿ ಇಲಾಖೆ ಕೃಷಿಯಲ್ಲಿ ಪ್ಲಾಸ್ಟಿಕ್‌ ಗ್ರೋಬ್ಯಾಗ್‌ ಬಳಕೆ ಬೇಡ ಎಂದು ಹೇಳಿದೆ. ಜೈವಿಕವಾದ ಗ್ರೋಬ್ಯಾಗ್‌ ಬಳಕೆಗೆ ಆದ್ಯತೆ ನೀಡಲು ಕೃಷಿಕರನ್ನು ಪ್ರೇರೇಪಿಸಿದೆ.

Advertisement
Advertisement

ಕೃಷಿಯಲ್ಲಿ ಪ್ಲಾಸ್ಟಿಕ್ ಗ್ರೋ ಬ್ಯಾಗ್ ಬೇಡ ಎಂದು ಹೇಳಿದ ಕೇರಳ ಕೃಷಿ ಇಲಾಖೆ ತನ್ನ ಯೋಜನೆಗಳಿಗಾಗಿ ಇಲಾಖೆಯು ಪ್ಲಾಸ್ಟಿಕ್ ಚೀಲಗಳ ಬದಲಾಗಿ ಪರಿಸರ ಸ್ನೇಹಿ ಪರ್ಯಾಯಗಳಾದ ಜೇಡಿಮಣ್ಣು ಅಥವಾ ತೆಂಗಿನಕಾಯಿಯ ಮಡಿಕೆಗಳು ಮತ್ತು ಮರುಬಳಕೆ ಮಾಡಬಹುದಾದ ಹೆಚ್ಚಿನ ಸಾಂದ್ರತೆಯ ಪಾಲಿಥಿಲೀನ್ ಪಾತ್ರೆಗಳೊಂದಿಗೆ ಬದಲಾಯಿಸಲು ಸಿದ್ಧತೆ ನಡೆಸಿದೆ.  ಪರಿಸರ ಸ್ನೇಹಿ ಮಾರ್ಗವನ್ನು ತುಳಿಯುತ್ತಿರುವ ಕೇರಳದ ಕೃಷಿ ಇಲಾಖೆಯು ರಾಜ್ಯದಾದ್ಯಂತ ತರಕಾರಿ ತೋಟಗಳು ಮತ್ತು ಮೇಲ್ಛಾವಣಿ ಫಾರ್ಮ್‌ಗಳಲ್ಲಿ  ಪ್ಲಾಸ್ಟಿಕ್ ಗ್ರೋ ಬ್ಯಾಗ್‌ಗಳನ್ನು ಬಳಸುವುದನ್ನು ನಿಲ್ಲಿಸಲು ನಿರ್ಧರಿಸಿದೆ. ಸರ್ಕಾರವೇ ಈ ಮಾದರಿಗಳನ್ನು ಮಾಡಿ ಜನರನ್ನು ಪ್ರೇರೇಪಿಸುತ್ತಿದೆ.

Advertisement

ಜೈವಿಕವಲ್ಲದ ಚೀಲಗಳನ್ನು ಕೃಷಿ ಉದ್ದೇಶಗಳಿಗಾಗಿ ಬಳಸುವುದರಿಂದ ಪರಿಸರಕ್ಕೆ ಗಮನಾರ್ಹ ಹಾನಿ ಉಂಟಾಗುತ್ತದೆ ಮತ್ತು ಅವುಗಳ ಬಳಕೆಯನ್ನುಕಡಿಮೆ ಮಾಡಬೇಕು ಎಂದು ಇಲಾಖೆ ತನ್ನ ಕಚೇರಿಗಳಿಗೆ ಹೊರಡಿಸಿದ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ. ಕೃಷಿ ಇಲಾಖೆ ಜಾರಿಗೆ ತಂದಿರುವ ಯೋಜನೆಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಗ್ರೋ ಬ್ಯಾಗ್‌ಗಳನ್ನು ಬಳಸಬಾರದು ಎಂದು ಸುತ್ತೋಲೆಯಲ್ಲಿ ಸೇರಿಸಿದೆ.

ಮನೆಯ ಮಟ್ಟದಲ್ಲಿ ತರಕಾರಿ ಕೃಷಿಯನ್ನು ಉತ್ತೇಜಿಸಲು ‘ಸುಭಿಕ್ಷಾ ಕೇರಳಂ’ ನಂತಹ ಆಹಾರ ಭದ್ರತಾ ಯೋಜನೆಗಳನ್ನು ಹೊರತಂದ ನಂತರ ರಾಜ್ಯಾದ್ಯಂತ ಗ್ರೋ ಬ್ಯಾಗ್‌ಗಳು ಹೆಚ್ಚು ಪರಿಚಯವಾಗಿತ್ತು.ಇದರಿಂದ ಕೃಷಿಯಲ್ಲೂ ಮತ್ತಷ್ಟು ಪ್ಲಾಸ್ಟಿಕ್‌ ತುಂಬುವ ಆತಂಕವಿತ್ತು. ಪರಿಸರ ಸ್ನೇಹಿ ವಿಧಾನಗಳ ಮೂಲಕ ಸುಸ್ಥಿರತೆ ಮತ್ತು ಆಹಾರ ಭದ್ರತೆಯನ್ನು ಇನ್ನಷ್ಟು ಗಟ್ಟಿಪಡಿಸಲು ಕೇರಳದ ಕೃಷಿ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

14 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

14 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

18 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

19 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

23 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago