ಸುದ್ದಿಗಳು

ಕೇರಳ ಮತ್ತು ಬೆಂಗಳೂರು ಖಾಸಗಿ ಬಸ್‌ಗಳ ದರ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳ ಮತ್ತು ಬೆಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಬೇರೆ ಬೇರೆ ಕ್ಲಾಸ್‌ನ ದರದಲ್ಲಿ ಕನಿಷ್ಠ 150 ರಿಂದ 250 ರೂ. ವರೆಗೂ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.

Advertisement

ಎರ್ನಾಕುಲಂ-ಬೆಂಗಳೂರು ಜನಪ್ರಿಯ ಹಾಗೂ ಹೆಚ್ಚು ದಟ್ಟಣೆಯ ರೂಟ್ ಆಗಿದ್ದು, ಈ ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ದರ ದುಬಾರಿಯಾಗಿದೆ. 1350 ರೂ. ಇದ್ದ ದರವನ್ನು ಈಗ 1,500 ರೂ.ಗೆ ಏರಿಕೆ ಮಾಡಲಾಗಿದೆ. ಕರ್ನಾಟಕ ಅಂತಾರಾಜ್ಯ ಬಸ್ ನಿರ್ವಾಹಕರ ಸಂಘಟನೆಯು ಈ ದರವನ್ನು ಹೆಚ್ಚಿಸಿದೆ. ಕೇರಳ ಸರ್ಕಾರವು, ಕೇರಳ ಹೊರತಾಗಿ ನೋಂದಣಿ ಮಾಡಿಕೊಂಡಿರುವ ವಾಹನಗಳ ಮೇಲೆ ವೆಹಿಕಲ್ ಟ್ಯಾಕ್ಸ್ ಪರಿಚಯಿಸಿದೆ. ಈ ತೆರಿಗೆ ನವೆಂಬರ್ 1ರಿಂದ ಜಾರಿಗೆ ಬಂದಿದೆ.

ಎರ್ನಾಕುಲಂ-ಬೆಂಗಳೂರು ರೂಟ್‌ನಲ್ಲಿ ಓಡಾಡುವ ಬಹುತೇಕ ಬಸ್‌ಗಳು ಕೇರಳದ ಹೊರಗೆ ನೋಂದಣಿಯಾದ ಬಸ್‌ಗಳಿವೆ. ಕೇರಳದಲ್ಲಿ ನೋಂದಣಿ ದರ ಹೆಚ್ಚಿರುವುದಕ್ಕೆ ಇದಕ್ಕೆ ಕಾರಣ. ಈ ತೆರಿಗೆ ಭಾರವನ್ನು ಖಾಸಗಿ ಬಸ್ ನಿರ್ವಾಹಕರು ಇದೀಗ ಪ್ರಯಾಣಿಕರಿಗೆ ವರ್ಗಾಯಿಸಿದ್ದಾರೆ. ಹಾಗಾಗಿ, ಬಸ್ ದರ ಹೆಚ್ಚಿಸಿದ್ದಾರೆ. ಈ ಹೊಸ ತೆರಿಗೆ ಜಾರಿಗೆ ಬಂದ ಹಿನ್ನೆಲೆ ಬಸ್ ನಿರ್ವಾಹಕರು ಪ್ರತಿ ತ್ರೈಮಾಸಿಕವಾಗಿ, ಪ್ರತಿ ಸೀಟಿಗೆ 4 ಸಾವಿರ ರೂ. ತೆರಿಗೆಯನ್ನು ನೀಡಬೇಕಾಗುತ್ತದೆ. ಅಂದರೆ, 36 ಸೀಟ್‌ಗಳಿರುವ ಬಸ್‌ ಕನಿಷ್ಠ 1.44 ಲಕ್ಷ ರೂ. ತೆರಿಗೆಯನ್ನು ಪಾವತಿಸಬೇಕು.

ಈ ಕಾರಣಕ್ಕಾಗಿ ಬಸ್‌ಗಳ ನಡುವಿನ ದರ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಗೊಂದಲವಾಗಬಾರದು ಎಂಬ ಕಾರಣಕ್ಕೆ ಏಕರೂಪ ಬಸ್ ದರವನ್ನು ರೂಪಿಸಲಾಗಿದೆ ಎಂದು ಕರ್ನಾಟಕ ಅಂತರ್ ರಾಜ್ಯ ಬಸ್ ನಿರ್ವಾಹಕರ ಸಂಘಟನೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

6 hours ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

13 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

20 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago