ಕೇರಳ ಮತ್ತು ಬೆಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಬೇರೆ ಬೇರೆ ಕ್ಲಾಸ್ನ ದರದಲ್ಲಿ ಕನಿಷ್ಠ 150 ರಿಂದ 250 ರೂ. ವರೆಗೂ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.
ಎರ್ನಾಕುಲಂ-ಬೆಂಗಳೂರು ಜನಪ್ರಿಯ ಹಾಗೂ ಹೆಚ್ಚು ದಟ್ಟಣೆಯ ರೂಟ್ ಆಗಿದ್ದು, ಈ ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ದರ ದುಬಾರಿಯಾಗಿದೆ. 1350 ರೂ. ಇದ್ದ ದರವನ್ನು ಈಗ 1,500 ರೂ.ಗೆ ಏರಿಕೆ ಮಾಡಲಾಗಿದೆ. ಕರ್ನಾಟಕ ಅಂತಾರಾಜ್ಯ ಬಸ್ ನಿರ್ವಾಹಕರ ಸಂಘಟನೆಯು ಈ ದರವನ್ನು ಹೆಚ್ಚಿಸಿದೆ. ಕೇರಳ ಸರ್ಕಾರವು, ಕೇರಳ ಹೊರತಾಗಿ ನೋಂದಣಿ ಮಾಡಿಕೊಂಡಿರುವ ವಾಹನಗಳ ಮೇಲೆ ವೆಹಿಕಲ್ ಟ್ಯಾಕ್ಸ್ ಪರಿಚಯಿಸಿದೆ. ಈ ತೆರಿಗೆ ನವೆಂಬರ್ 1ರಿಂದ ಜಾರಿಗೆ ಬಂದಿದೆ.
ಎರ್ನಾಕುಲಂ-ಬೆಂಗಳೂರು ರೂಟ್ನಲ್ಲಿ ಓಡಾಡುವ ಬಹುತೇಕ ಬಸ್ಗಳು ಕೇರಳದ ಹೊರಗೆ ನೋಂದಣಿಯಾದ ಬಸ್ಗಳಿವೆ. ಕೇರಳದಲ್ಲಿ ನೋಂದಣಿ ದರ ಹೆಚ್ಚಿರುವುದಕ್ಕೆ ಇದಕ್ಕೆ ಕಾರಣ. ಈ ತೆರಿಗೆ ಭಾರವನ್ನು ಖಾಸಗಿ ಬಸ್ ನಿರ್ವಾಹಕರು ಇದೀಗ ಪ್ರಯಾಣಿಕರಿಗೆ ವರ್ಗಾಯಿಸಿದ್ದಾರೆ. ಹಾಗಾಗಿ, ಬಸ್ ದರ ಹೆಚ್ಚಿಸಿದ್ದಾರೆ. ಈ ಹೊಸ ತೆರಿಗೆ ಜಾರಿಗೆ ಬಂದ ಹಿನ್ನೆಲೆ ಬಸ್ ನಿರ್ವಾಹಕರು ಪ್ರತಿ ತ್ರೈಮಾಸಿಕವಾಗಿ, ಪ್ರತಿ ಸೀಟಿಗೆ 4 ಸಾವಿರ ರೂ. ತೆರಿಗೆಯನ್ನು ನೀಡಬೇಕಾಗುತ್ತದೆ. ಅಂದರೆ, 36 ಸೀಟ್ಗಳಿರುವ ಬಸ್ ಕನಿಷ್ಠ 1.44 ಲಕ್ಷ ರೂ. ತೆರಿಗೆಯನ್ನು ಪಾವತಿಸಬೇಕು.
ಈ ಕಾರಣಕ್ಕಾಗಿ ಬಸ್ಗಳ ನಡುವಿನ ದರ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಗೊಂದಲವಾಗಬಾರದು ಎಂಬ ಕಾರಣಕ್ಕೆ ಏಕರೂಪ ಬಸ್ ದರವನ್ನು ರೂಪಿಸಲಾಗಿದೆ ಎಂದು ಕರ್ನಾಟಕ ಅಂತರ್ ರಾಜ್ಯ ಬಸ್ ನಿರ್ವಾಹಕರ ಸಂಘಟನೆ ತಿಳಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…