ಸುದ್ದಿಗಳು

ಕೇರಳ ಮತ್ತು ಬೆಂಗಳೂರು ಖಾಸಗಿ ಬಸ್‌ಗಳ ದರ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳ ಮತ್ತು ಬೆಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಬೇರೆ ಬೇರೆ ಕ್ಲಾಸ್‌ನ ದರದಲ್ಲಿ ಕನಿಷ್ಠ 150 ರಿಂದ 250 ರೂ. ವರೆಗೂ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.

Advertisement
Advertisement

ಎರ್ನಾಕುಲಂ-ಬೆಂಗಳೂರು ಜನಪ್ರಿಯ ಹಾಗೂ ಹೆಚ್ಚು ದಟ್ಟಣೆಯ ರೂಟ್ ಆಗಿದ್ದು, ಈ ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ದರ ದುಬಾರಿಯಾಗಿದೆ. 1350 ರೂ. ಇದ್ದ ದರವನ್ನು ಈಗ 1,500 ರೂ.ಗೆ ಏರಿಕೆ ಮಾಡಲಾಗಿದೆ. ಕರ್ನಾಟಕ ಅಂತಾರಾಜ್ಯ ಬಸ್ ನಿರ್ವಾಹಕರ ಸಂಘಟನೆಯು ಈ ದರವನ್ನು ಹೆಚ್ಚಿಸಿದೆ. ಕೇರಳ ಸರ್ಕಾರವು, ಕೇರಳ ಹೊರತಾಗಿ ನೋಂದಣಿ ಮಾಡಿಕೊಂಡಿರುವ ವಾಹನಗಳ ಮೇಲೆ ವೆಹಿಕಲ್ ಟ್ಯಾಕ್ಸ್ ಪರಿಚಯಿಸಿದೆ. ಈ ತೆರಿಗೆ ನವೆಂಬರ್ 1ರಿಂದ ಜಾರಿಗೆ ಬಂದಿದೆ.

ಎರ್ನಾಕುಲಂ-ಬೆಂಗಳೂರು ರೂಟ್‌ನಲ್ಲಿ ಓಡಾಡುವ ಬಹುತೇಕ ಬಸ್‌ಗಳು ಕೇರಳದ ಹೊರಗೆ ನೋಂದಣಿಯಾದ ಬಸ್‌ಗಳಿವೆ. ಕೇರಳದಲ್ಲಿ ನೋಂದಣಿ ದರ ಹೆಚ್ಚಿರುವುದಕ್ಕೆ ಇದಕ್ಕೆ ಕಾರಣ. ಈ ತೆರಿಗೆ ಭಾರವನ್ನು ಖಾಸಗಿ ಬಸ್ ನಿರ್ವಾಹಕರು ಇದೀಗ ಪ್ರಯಾಣಿಕರಿಗೆ ವರ್ಗಾಯಿಸಿದ್ದಾರೆ. ಹಾಗಾಗಿ, ಬಸ್ ದರ ಹೆಚ್ಚಿಸಿದ್ದಾರೆ. ಈ ಹೊಸ ತೆರಿಗೆ ಜಾರಿಗೆ ಬಂದ ಹಿನ್ನೆಲೆ ಬಸ್ ನಿರ್ವಾಹಕರು ಪ್ರತಿ ತ್ರೈಮಾಸಿಕವಾಗಿ, ಪ್ರತಿ ಸೀಟಿಗೆ 4 ಸಾವಿರ ರೂ. ತೆರಿಗೆಯನ್ನು ನೀಡಬೇಕಾಗುತ್ತದೆ. ಅಂದರೆ, 36 ಸೀಟ್‌ಗಳಿರುವ ಬಸ್‌ ಕನಿಷ್ಠ 1.44 ಲಕ್ಷ ರೂ. ತೆರಿಗೆಯನ್ನು ಪಾವತಿಸಬೇಕು.

ಈ ಕಾರಣಕ್ಕಾಗಿ ಬಸ್‌ಗಳ ನಡುವಿನ ದರ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಗೊಂದಲವಾಗಬಾರದು ಎಂಬ ಕಾರಣಕ್ಕೆ ಏಕರೂಪ ಬಸ್ ದರವನ್ನು ರೂಪಿಸಲಾಗಿದೆ ಎಂದು ಕರ್ನಾಟಕ ಅಂತರ್ ರಾಜ್ಯ ಬಸ್ ನಿರ್ವಾಹಕರ ಸಂಘಟನೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

9 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

14 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

22 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

22 hours ago