ಕೇರಳ ಮತ್ತು ಬೆಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಬೇರೆ ಬೇರೆ ಕ್ಲಾಸ್ನ ದರದಲ್ಲಿ ಕನಿಷ್ಠ 150 ರಿಂದ 250 ರೂ. ವರೆಗೂ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.
ಎರ್ನಾಕುಲಂ-ಬೆಂಗಳೂರು ಜನಪ್ರಿಯ ಹಾಗೂ ಹೆಚ್ಚು ದಟ್ಟಣೆಯ ರೂಟ್ ಆಗಿದ್ದು, ಈ ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ದರ ದುಬಾರಿಯಾಗಿದೆ. 1350 ರೂ. ಇದ್ದ ದರವನ್ನು ಈಗ 1,500 ರೂ.ಗೆ ಏರಿಕೆ ಮಾಡಲಾಗಿದೆ. ಕರ್ನಾಟಕ ಅಂತಾರಾಜ್ಯ ಬಸ್ ನಿರ್ವಾಹಕರ ಸಂಘಟನೆಯು ಈ ದರವನ್ನು ಹೆಚ್ಚಿಸಿದೆ. ಕೇರಳ ಸರ್ಕಾರವು, ಕೇರಳ ಹೊರತಾಗಿ ನೋಂದಣಿ ಮಾಡಿಕೊಂಡಿರುವ ವಾಹನಗಳ ಮೇಲೆ ವೆಹಿಕಲ್ ಟ್ಯಾಕ್ಸ್ ಪರಿಚಯಿಸಿದೆ. ಈ ತೆರಿಗೆ ನವೆಂಬರ್ 1ರಿಂದ ಜಾರಿಗೆ ಬಂದಿದೆ.
ಎರ್ನಾಕುಲಂ-ಬೆಂಗಳೂರು ರೂಟ್ನಲ್ಲಿ ಓಡಾಡುವ ಬಹುತೇಕ ಬಸ್ಗಳು ಕೇರಳದ ಹೊರಗೆ ನೋಂದಣಿಯಾದ ಬಸ್ಗಳಿವೆ. ಕೇರಳದಲ್ಲಿ ನೋಂದಣಿ ದರ ಹೆಚ್ಚಿರುವುದಕ್ಕೆ ಇದಕ್ಕೆ ಕಾರಣ. ಈ ತೆರಿಗೆ ಭಾರವನ್ನು ಖಾಸಗಿ ಬಸ್ ನಿರ್ವಾಹಕರು ಇದೀಗ ಪ್ರಯಾಣಿಕರಿಗೆ ವರ್ಗಾಯಿಸಿದ್ದಾರೆ. ಹಾಗಾಗಿ, ಬಸ್ ದರ ಹೆಚ್ಚಿಸಿದ್ದಾರೆ. ಈ ಹೊಸ ತೆರಿಗೆ ಜಾರಿಗೆ ಬಂದ ಹಿನ್ನೆಲೆ ಬಸ್ ನಿರ್ವಾಹಕರು ಪ್ರತಿ ತ್ರೈಮಾಸಿಕವಾಗಿ, ಪ್ರತಿ ಸೀಟಿಗೆ 4 ಸಾವಿರ ರೂ. ತೆರಿಗೆಯನ್ನು ನೀಡಬೇಕಾಗುತ್ತದೆ. ಅಂದರೆ, 36 ಸೀಟ್ಗಳಿರುವ ಬಸ್ ಕನಿಷ್ಠ 1.44 ಲಕ್ಷ ರೂ. ತೆರಿಗೆಯನ್ನು ಪಾವತಿಸಬೇಕು.
ಈ ಕಾರಣಕ್ಕಾಗಿ ಬಸ್ಗಳ ನಡುವಿನ ದರ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಗೊಂದಲವಾಗಬಾರದು ಎಂಬ ಕಾರಣಕ್ಕೆ ಏಕರೂಪ ಬಸ್ ದರವನ್ನು ರೂಪಿಸಲಾಗಿದೆ ಎಂದು ಕರ್ನಾಟಕ ಅಂತರ್ ರಾಜ್ಯ ಬಸ್ ನಿರ್ವಾಹಕರ ಸಂಘಟನೆ ತಿಳಿಸಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…