ಕೇರಳ ಮತ್ತು ಬೆಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಬೇರೆ ಬೇರೆ ಕ್ಲಾಸ್ನ ದರದಲ್ಲಿ ಕನಿಷ್ಠ 150 ರಿಂದ 250 ರೂ. ವರೆಗೂ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.
ಎರ್ನಾಕುಲಂ-ಬೆಂಗಳೂರು ಜನಪ್ರಿಯ ಹಾಗೂ ಹೆಚ್ಚು ದಟ್ಟಣೆಯ ರೂಟ್ ಆಗಿದ್ದು, ಈ ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ದರ ದುಬಾರಿಯಾಗಿದೆ. 1350 ರೂ. ಇದ್ದ ದರವನ್ನು ಈಗ 1,500 ರೂ.ಗೆ ಏರಿಕೆ ಮಾಡಲಾಗಿದೆ. ಕರ್ನಾಟಕ ಅಂತಾರಾಜ್ಯ ಬಸ್ ನಿರ್ವಾಹಕರ ಸಂಘಟನೆಯು ಈ ದರವನ್ನು ಹೆಚ್ಚಿಸಿದೆ. ಕೇರಳ ಸರ್ಕಾರವು, ಕೇರಳ ಹೊರತಾಗಿ ನೋಂದಣಿ ಮಾಡಿಕೊಂಡಿರುವ ವಾಹನಗಳ ಮೇಲೆ ವೆಹಿಕಲ್ ಟ್ಯಾಕ್ಸ್ ಪರಿಚಯಿಸಿದೆ. ಈ ತೆರಿಗೆ ನವೆಂಬರ್ 1ರಿಂದ ಜಾರಿಗೆ ಬಂದಿದೆ.
ಎರ್ನಾಕುಲಂ-ಬೆಂಗಳೂರು ರೂಟ್ನಲ್ಲಿ ಓಡಾಡುವ ಬಹುತೇಕ ಬಸ್ಗಳು ಕೇರಳದ ಹೊರಗೆ ನೋಂದಣಿಯಾದ ಬಸ್ಗಳಿವೆ. ಕೇರಳದಲ್ಲಿ ನೋಂದಣಿ ದರ ಹೆಚ್ಚಿರುವುದಕ್ಕೆ ಇದಕ್ಕೆ ಕಾರಣ. ಈ ತೆರಿಗೆ ಭಾರವನ್ನು ಖಾಸಗಿ ಬಸ್ ನಿರ್ವಾಹಕರು ಇದೀಗ ಪ್ರಯಾಣಿಕರಿಗೆ ವರ್ಗಾಯಿಸಿದ್ದಾರೆ. ಹಾಗಾಗಿ, ಬಸ್ ದರ ಹೆಚ್ಚಿಸಿದ್ದಾರೆ. ಈ ಹೊಸ ತೆರಿಗೆ ಜಾರಿಗೆ ಬಂದ ಹಿನ್ನೆಲೆ ಬಸ್ ನಿರ್ವಾಹಕರು ಪ್ರತಿ ತ್ರೈಮಾಸಿಕವಾಗಿ, ಪ್ರತಿ ಸೀಟಿಗೆ 4 ಸಾವಿರ ರೂ. ತೆರಿಗೆಯನ್ನು ನೀಡಬೇಕಾಗುತ್ತದೆ. ಅಂದರೆ, 36 ಸೀಟ್ಗಳಿರುವ ಬಸ್ ಕನಿಷ್ಠ 1.44 ಲಕ್ಷ ರೂ. ತೆರಿಗೆಯನ್ನು ಪಾವತಿಸಬೇಕು.
ಈ ಕಾರಣಕ್ಕಾಗಿ ಬಸ್ಗಳ ನಡುವಿನ ದರ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಗೊಂದಲವಾಗಬಾರದು ಎಂಬ ಕಾರಣಕ್ಕೆ ಏಕರೂಪ ಬಸ್ ದರವನ್ನು ರೂಪಿಸಲಾಗಿದೆ ಎಂದು ಕರ್ನಾಟಕ ಅಂತರ್ ರಾಜ್ಯ ಬಸ್ ನಿರ್ವಾಹಕರ ಸಂಘಟನೆ ತಿಳಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…