Advertisement
ಸುದ್ದಿಗಳು

ಕೇರಳ ಮತ್ತು ಬೆಂಗಳೂರು ಖಾಸಗಿ ಬಸ್‌ಗಳ ದರ ಹೆಚ್ಚಳ

Share

ಕೇರಳ ಮತ್ತು ಬೆಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಬೇರೆ ಬೇರೆ ಕ್ಲಾಸ್‌ನ ದರದಲ್ಲಿ ಕನಿಷ್ಠ 150 ರಿಂದ 250 ರೂ. ವರೆಗೂ ಟಿಕೆಟ್ ದರವನ್ನು ಏರಿಕೆ ಮಾಡಲಾಗಿದೆ.

ಎರ್ನಾಕುಲಂ-ಬೆಂಗಳೂರು ಜನಪ್ರಿಯ ಹಾಗೂ ಹೆಚ್ಚು ದಟ್ಟಣೆಯ ರೂಟ್ ಆಗಿದ್ದು, ಈ ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ದರ ದುಬಾರಿಯಾಗಿದೆ. 1350 ರೂ. ಇದ್ದ ದರವನ್ನು ಈಗ 1,500 ರೂ.ಗೆ ಏರಿಕೆ ಮಾಡಲಾಗಿದೆ. ಕರ್ನಾಟಕ ಅಂತಾರಾಜ್ಯ ಬಸ್ ನಿರ್ವಾಹಕರ ಸಂಘಟನೆಯು ಈ ದರವನ್ನು ಹೆಚ್ಚಿಸಿದೆ. ಕೇರಳ ಸರ್ಕಾರವು, ಕೇರಳ ಹೊರತಾಗಿ ನೋಂದಣಿ ಮಾಡಿಕೊಂಡಿರುವ ವಾಹನಗಳ ಮೇಲೆ ವೆಹಿಕಲ್ ಟ್ಯಾಕ್ಸ್ ಪರಿಚಯಿಸಿದೆ. ಈ ತೆರಿಗೆ ನವೆಂಬರ್ 1ರಿಂದ ಜಾರಿಗೆ ಬಂದಿದೆ.

ಎರ್ನಾಕುಲಂ-ಬೆಂಗಳೂರು ರೂಟ್‌ನಲ್ಲಿ ಓಡಾಡುವ ಬಹುತೇಕ ಬಸ್‌ಗಳು ಕೇರಳದ ಹೊರಗೆ ನೋಂದಣಿಯಾದ ಬಸ್‌ಗಳಿವೆ. ಕೇರಳದಲ್ಲಿ ನೋಂದಣಿ ದರ ಹೆಚ್ಚಿರುವುದಕ್ಕೆ ಇದಕ್ಕೆ ಕಾರಣ. ಈ ತೆರಿಗೆ ಭಾರವನ್ನು ಖಾಸಗಿ ಬಸ್ ನಿರ್ವಾಹಕರು ಇದೀಗ ಪ್ರಯಾಣಿಕರಿಗೆ ವರ್ಗಾಯಿಸಿದ್ದಾರೆ. ಹಾಗಾಗಿ, ಬಸ್ ದರ ಹೆಚ್ಚಿಸಿದ್ದಾರೆ. ಈ ಹೊಸ ತೆರಿಗೆ ಜಾರಿಗೆ ಬಂದ ಹಿನ್ನೆಲೆ ಬಸ್ ನಿರ್ವಾಹಕರು ಪ್ರತಿ ತ್ರೈಮಾಸಿಕವಾಗಿ, ಪ್ರತಿ ಸೀಟಿಗೆ 4 ಸಾವಿರ ರೂ. ತೆರಿಗೆಯನ್ನು ನೀಡಬೇಕಾಗುತ್ತದೆ. ಅಂದರೆ, 36 ಸೀಟ್‌ಗಳಿರುವ ಬಸ್‌ ಕನಿಷ್ಠ 1.44 ಲಕ್ಷ ರೂ. ತೆರಿಗೆಯನ್ನು ಪಾವತಿಸಬೇಕು.

ಈ ಕಾರಣಕ್ಕಾಗಿ ಬಸ್‌ಗಳ ನಡುವಿನ ದರ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಗೊಂದಲವಾಗಬಾರದು ಎಂಬ ಕಾರಣಕ್ಕೆ ಏಕರೂಪ ಬಸ್ ದರವನ್ನು ರೂಪಿಸಲಾಗಿದೆ ಎಂದು ಕರ್ನಾಟಕ ಅಂತರ್ ರಾಜ್ಯ ಬಸ್ ನಿರ್ವಾಹಕರ ಸಂಘಟನೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago