ಕೇರಳ ಕೆಎಸ್ಆರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಹೆಜ್ಜೆ ಇಟ್ಟಿದ್ದು, ತಿರುವನಂತಪುರಂನಿಂದ ಎರ್ನಾಕುಳಂಗೆ ಎಂಡ್-ಟು-ಎಂಡ್ ವ್ಯವಸ್ಥೆ ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಈ ಜಾರಿಗೆ ತಂದ ಹೊಸ ವ್ಯವಸ್ಥೆಯಲ್ಲಿ ಪ್ರಯಾಣಿಕರು ಬಸ್ ಹೊರಡುವ ಅರ್ಧ ಗಂಟೆಯ ಮೊದಲು ಟಿಕೆಟ್ ಖರೀದಿಸಿ ಯಾವುದೇ ಆತಂಕವಿಲ್ಲದೆ ನೇರವಾಗಿ ತಾವು ತಲುಪಬೇಕಾದ ಸ್ಥಳ ತಲುಪಬಹುದಾಗಿದೆ.
ತಿರುವನಂತಪುರದಿಂದ ಬೆಳಗ್ಗೆ 5.10ಕ್ಕೆ ಹೊರಟು 9.40ಕ್ಕೆ ಎರ್ನಾಕುಳಂ ತಲುಪಲಿರುವ ಬಸ್ ಬಳಿಕ ಸಂಜೆ 5.20ಕ್ಕೆ ಎರ್ನಾಕುಳಂನಿಂದ ಹೊರಟು 9.50ಕ್ಕೆ ತಿರುವನಂತಪುರ ತಲುಪುವ ವ್ಯವಸ್ಥೆ ಮಾಡಲಾಗುತ್ತಿದೆ.
ಈ ಸೇವೆಗಾಗಿ ಹವಾನಿಯಂತ್ರಿತ ಬಸ್ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕೊಲ್ಲಂ ಅಯಾತ್ ಫೀಡರ್ ನಿಲ್ದಾಣ ಹಾಗೂ ಅಲಪ್ಪುಳ ಕೊಮ್ಮಡಿ ಫೀಡರ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಈ ಬಸ್ಗಳು ಒಂದು ನಿಮಿಷ ಅವಧಿಗೆ ನಿಲ್ಲುತ್ತವೆ. ಭಾನುವಾರದಿಂದ ಪ್ರಯಾಣಿಕರು ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡಬಹುದು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…