ಕೇರಳ ಕೆಎಸ್ಆರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಹೆಜ್ಜೆ ಇಟ್ಟಿದ್ದು, ತಿರುವನಂತಪುರಂನಿಂದ ಎರ್ನಾಕುಳಂಗೆ ಎಂಡ್-ಟು-ಎಂಡ್ ವ್ಯವಸ್ಥೆ ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಈ ಜಾರಿಗೆ ತಂದ ಹೊಸ ವ್ಯವಸ್ಥೆಯಲ್ಲಿ ಪ್ರಯಾಣಿಕರು ಬಸ್ ಹೊರಡುವ ಅರ್ಧ ಗಂಟೆಯ ಮೊದಲು ಟಿಕೆಟ್ ಖರೀದಿಸಿ ಯಾವುದೇ ಆತಂಕವಿಲ್ಲದೆ ನೇರವಾಗಿ ತಾವು ತಲುಪಬೇಕಾದ ಸ್ಥಳ ತಲುಪಬಹುದಾಗಿದೆ.
ತಿರುವನಂತಪುರದಿಂದ ಬೆಳಗ್ಗೆ 5.10ಕ್ಕೆ ಹೊರಟು 9.40ಕ್ಕೆ ಎರ್ನಾಕುಳಂ ತಲುಪಲಿರುವ ಬಸ್ ಬಳಿಕ ಸಂಜೆ 5.20ಕ್ಕೆ ಎರ್ನಾಕುಳಂನಿಂದ ಹೊರಟು 9.50ಕ್ಕೆ ತಿರುವನಂತಪುರ ತಲುಪುವ ವ್ಯವಸ್ಥೆ ಮಾಡಲಾಗುತ್ತಿದೆ.
ಈ ಸೇವೆಗಾಗಿ ಹವಾನಿಯಂತ್ರಿತ ಬಸ್ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಕೊಲ್ಲಂ ಅಯಾತ್ ಫೀಡರ್ ನಿಲ್ದಾಣ ಹಾಗೂ ಅಲಪ್ಪುಳ ಕೊಮ್ಮಡಿ ಫೀಡರ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಈ ಬಸ್ಗಳು ಒಂದು ನಿಮಿಷ ಅವಧಿಗೆ ನಿಲ್ಲುತ್ತವೆ. ಭಾನುವಾರದಿಂದ ಪ್ರಯಾಣಿಕರು ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡಬಹುದು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…