#Agriculture | ಕೃಷಿ ಇಷ್ಟ ಪಟ್ಟು ದುಡಿದರೆ ಆಡಿ ಕಾರಲ್ಲಿ ಹೋಗಬಹುದು…! | ಕೇರಳದ ಯುವ ಕೃಷಿಕನ ಸ್ಟೋರಿ… |

October 1, 2023
9:56 AM
ಕೇರಳದ ಯುವಕನೊಬ್ಬ ಪಾಲಕ್‌ ಸೊಪ್ಪು ಮಾರಾಟಕ್ಕೆ ತನ್ನ ಆಡಿ ಕಾರಲ್ಲಿ ಬಂದು ತಾನೇ ಸೊಪ್ಪು ಮಾರಾಟ ಮಾಡಿರುವುದು ಭಾರೀ ಸದ್ದು ಮಾಡಿದೆ.

ಕೃಷಿ ಎಂದರೆ, ವ್ಯವಸಾಯ ಎಂದರೆ ನಷ್ಟ, ರೈತನ ಬದುಕೇ ಸಂಕಷ್ಟ ಎಂಬ ಋಣಾತ್ಮಕ ಭಾವನೆ ಎಲ್ಲೆಡೆಯೂ ಇದೆ. ಆದರೆ ಕೃಷಿಯನ್ನು ಇಷ್ಟಪಟ್ಟು, ಕೃಷಿಯೇ ಉಸಿರಾದರೆ ಯಶಸ್ಸು ಸಾಧ್ಯವಿದೆ. ಇದಕ್ಕೆ ಅನೇಕ ಉದಾಹರಣೆ ಇದೆ. ಇದೀಗ ಕೇರಳದ ಯುವಕನೊಬ್ಬ ಪಾಲಕ್‌ ಸೊಪ್ಪು ಮಾರಾಟಕ್ಕೆ  ಆಡಿ ಕಾರಲ್ಲಿ ಬಂದು ತಾನೇ ಸೊಪ್ಪು ಮಾರಾಟ ಮಾಡಿರುವುದು ಭಾರೀ ಸದ್ದು ಮಾಡಿದೆ.ಇನ್ಟಾಗ್ರಾಮ್‌ನ ರೀಲ್ಸ್‌ ಸದ್ದು ಮಾಡುತ್ತಿದೆ.

Advertisement

ರೈತ ಆಡಿ ಕಾರು ತೆಗೆಯಬಾರದೇ..?. ರೈತ ಆಡಿ ಕಾರಲ್ಲಿ ಬಂದಾಕ್ಷಣವೇ ಅದೇಕೆ ಸದ್ದಾಗುತ್ತಿದೆ..?. ಕಾರಣ ಇಷ್ಟೇ, ಕೃಷಿ ಎಂದರೆ ನಷ್ಟದ ಬದುಕು ಎಂಬ ಭಾವನೆ ಎಲ್ಲೆಡೆಯೂ ಇದೆ. ಆದರೆ ಕೃಷಿಯನ್ನು ವೈಜ್ಞಾನಿಕವಾಗಿ, ಯೋಜನಾಬದ್ಧವಾಗಿ ಮಾಡಿದರೆ ಯಶಸ್ಸು ಸಾಧ್ಯವಿದೆ ಎನ್ನುವುದಕ್ಕೆ ಕೇರಳದ ಯುವ ರೈತ ಸುಜಿತ್ ಸಾಕ್ಷಿಯಾಗಿದ್ದಾರೆ.

ರಸ್ತೆಬದಿಯ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಮಾರಲು ಕೇರಳದ ಈ ಯುವ ರೈತ ಐಷಾರಾಮಿ ಕಾರಿನಲ್ಲಿ ಬಂದಿದ್ದಾರೆ. 44 ಲಕ್ಷ ರೂ.ಗಳ ಬೆಲೆಯ ಸೆಡಾನ್ ಆಡಿ ಕಾರಲ್ಲಿ ಆಗಮಿಸಿ ತನ್ನ ಬಟ್ಟೆ ಬದಲಾಯಿಸಿಕೊಂಡು ತರಕಾರಿ ಮಾರಲು ಪ್ರಾರಂಭಿಸುತ್ತಾರೆ.

ವ್ಯವಸಾಯವು ಸಾಮಾನ್ಯವಾಗಿ ದೈಹಿಕವಾದ ಬೇಡಿಕೆಯನ್ನು ಮತ್ತು ಆರ್ಥಿಕವಾಗಿ ಕಡಿಮೆ ಇಳುವರಿ ಇರುತ್ತದೆ ಎನ್ನುವ ಭಾವನೆಯನ್ನು ಹೊಂದಿದೆ. ಆದ್ದರಿಂದ, ಯುವ ಪೀಳಿಗೆಯು ಇಂತಹ ಆಯ್ಕೆಯನ್ನು ಎರಡನೇಯದ್ದಾಗಿಸುತ್ತಾರೆ. ಆದರೆ ಈಗ ಬೇಡಿಕೆಯಲ್ಲಿರುವ ಸಾವಯವ ಕೃಷಿಯಂತಹ ಆಯ್ಕೆಗಳನ್ನು ಮಾಡಿದರೆ  ಉತ್ತಮ ಆರ್ಥಿಕ ಆದಾಯವನ್ನು ನೀಡುತ್ತದೆ. ಈ ಯುವ ರೈತ ಮಾಡಿರುವ ಕೆಲಸವೂ ಅದೇ. ಸಾವಯವ ಕೃಷಿ. ಕೇರಳದ ಯುವ ರೈತ ಸುಜಿತ್ ಈ ಬದಲಾವಣೆಗೆ ಉತ್ತಮ ಉದಾಹರಣೆ. ತರಕಾರಿ ಮಾರಾಟ ಮಾಡಲು ಮಾರುಕಟ್ಟೆಗೆ ಬಂದಿರುವ ದೃಶ್ಯ ಈಗ ವೈರಲ್‌ ಆಗುತ್ತಿದೆ.

ವೆರೈಟಿ ಫಾರ್ಮರ್ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಲಾಗಿತ್ತು.ವರದಿಗಳ ಪ್ರಕಾರ, ಸುಜಿತ್ ಈ ಐಷಾರಾಮಿ ಆಡಿ ಕಾರನ್ನು ಸೆಕೆಂಡ್ ಹ್ಯಾಂಡ್ ಕಾರಾಗಿ ಖರೀದಿಸಿದ್ದಾರೆ.ಈ ವಿಡಿಯೋ ನೋಡಿದ ಬಳಿಕ ಕೆಲವು ಯುವಕರು ತಮಾಷೆ ಪ್ರತಿಕ್ರಿಯೆಗಳು ಹೀಗಿತ್ತು, ತರಕಾರಿಗಳನ್ನು ಬೆಳೆಸುವುದಕ್ಕಿಂತ, ಮಾರಾಟ ಮಾಡುವುದಕ್ಕಿಂತ ಮೊದಲು ಆಡಿ ಖರೀದಿಸಬೇಕು..! ಎಂದೂ ಪ್ರತಿಕ್ರಿಯೆ ಮಾಡಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ
May 8, 2025
8:57 PM
by: The Rural Mirror ಸುದ್ದಿಜಾಲ
ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ
May 8, 2025
8:46 PM
by: The Rural Mirror ಸುದ್ದಿಜಾಲ
ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ
May 8, 2025
8:32 PM
by: The Rural Mirror ಸುದ್ದಿಜಾಲ
ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |
May 8, 2025
8:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group