Advertisement
MIRROR FOCUS

#Agriculture | ಕೃಷಿ ಇಷ್ಟ ಪಟ್ಟು ದುಡಿದರೆ ಆಡಿ ಕಾರಲ್ಲಿ ಹೋಗಬಹುದು…! | ಕೇರಳದ ಯುವ ಕೃಷಿಕನ ಸ್ಟೋರಿ… |

Share

ಕೃಷಿ ಎಂದರೆ, ವ್ಯವಸಾಯ ಎಂದರೆ ನಷ್ಟ, ರೈತನ ಬದುಕೇ ಸಂಕಷ್ಟ ಎಂಬ ಋಣಾತ್ಮಕ ಭಾವನೆ ಎಲ್ಲೆಡೆಯೂ ಇದೆ. ಆದರೆ ಕೃಷಿಯನ್ನು ಇಷ್ಟಪಟ್ಟು, ಕೃಷಿಯೇ ಉಸಿರಾದರೆ ಯಶಸ್ಸು ಸಾಧ್ಯವಿದೆ. ಇದಕ್ಕೆ ಅನೇಕ ಉದಾಹರಣೆ ಇದೆ. ಇದೀಗ ಕೇರಳದ ಯುವಕನೊಬ್ಬ ಪಾಲಕ್‌ ಸೊಪ್ಪು ಮಾರಾಟಕ್ಕೆ  ಆಡಿ ಕಾರಲ್ಲಿ ಬಂದು ತಾನೇ ಸೊಪ್ಪು ಮಾರಾಟ ಮಾಡಿರುವುದು ಭಾರೀ ಸದ್ದು ಮಾಡಿದೆ.ಇನ್ಟಾಗ್ರಾಮ್‌ನ ರೀಲ್ಸ್‌ ಸದ್ದು ಮಾಡುತ್ತಿದೆ.

Advertisement
Advertisement

ರೈತ ಆಡಿ ಕಾರು ತೆಗೆಯಬಾರದೇ..?. ರೈತ ಆಡಿ ಕಾರಲ್ಲಿ ಬಂದಾಕ್ಷಣವೇ ಅದೇಕೆ ಸದ್ದಾಗುತ್ತಿದೆ..?. ಕಾರಣ ಇಷ್ಟೇ, ಕೃಷಿ ಎಂದರೆ ನಷ್ಟದ ಬದುಕು ಎಂಬ ಭಾವನೆ ಎಲ್ಲೆಡೆಯೂ ಇದೆ. ಆದರೆ ಕೃಷಿಯನ್ನು ವೈಜ್ಞಾನಿಕವಾಗಿ, ಯೋಜನಾಬದ್ಧವಾಗಿ ಮಾಡಿದರೆ ಯಶಸ್ಸು ಸಾಧ್ಯವಿದೆ ಎನ್ನುವುದಕ್ಕೆ ಕೇರಳದ ಯುವ ರೈತ ಸುಜಿತ್ ಸಾಕ್ಷಿಯಾಗಿದ್ದಾರೆ.

ರಸ್ತೆಬದಿಯ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಮಾರಲು ಕೇರಳದ ಈ ಯುವ ರೈತ ಐಷಾರಾಮಿ ಕಾರಿನಲ್ಲಿ ಬಂದಿದ್ದಾರೆ. 44 ಲಕ್ಷ ರೂ.ಗಳ ಬೆಲೆಯ ಸೆಡಾನ್ ಆಡಿ ಕಾರಲ್ಲಿ ಆಗಮಿಸಿ ತನ್ನ ಬಟ್ಟೆ ಬದಲಾಯಿಸಿಕೊಂಡು ತರಕಾರಿ ಮಾರಲು ಪ್ರಾರಂಭಿಸುತ್ತಾರೆ.

ವ್ಯವಸಾಯವು ಸಾಮಾನ್ಯವಾಗಿ ದೈಹಿಕವಾದ ಬೇಡಿಕೆಯನ್ನು ಮತ್ತು ಆರ್ಥಿಕವಾಗಿ ಕಡಿಮೆ ಇಳುವರಿ ಇರುತ್ತದೆ ಎನ್ನುವ ಭಾವನೆಯನ್ನು ಹೊಂದಿದೆ. ಆದ್ದರಿಂದ, ಯುವ ಪೀಳಿಗೆಯು ಇಂತಹ ಆಯ್ಕೆಯನ್ನು ಎರಡನೇಯದ್ದಾಗಿಸುತ್ತಾರೆ. ಆದರೆ ಈಗ ಬೇಡಿಕೆಯಲ್ಲಿರುವ ಸಾವಯವ ಕೃಷಿಯಂತಹ ಆಯ್ಕೆಗಳನ್ನು ಮಾಡಿದರೆ  ಉತ್ತಮ ಆರ್ಥಿಕ ಆದಾಯವನ್ನು ನೀಡುತ್ತದೆ. ಈ ಯುವ ರೈತ ಮಾಡಿರುವ ಕೆಲಸವೂ ಅದೇ. ಸಾವಯವ ಕೃಷಿ. ಕೇರಳದ ಯುವ ರೈತ ಸುಜಿತ್ ಈ ಬದಲಾವಣೆಗೆ ಉತ್ತಮ ಉದಾಹರಣೆ. ತರಕಾರಿ ಮಾರಾಟ ಮಾಡಲು ಮಾರುಕಟ್ಟೆಗೆ ಬಂದಿರುವ ದೃಶ್ಯ ಈಗ ವೈರಲ್‌ ಆಗುತ್ತಿದೆ.

ವೆರೈಟಿ ಫಾರ್ಮರ್ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಲಾಗಿತ್ತು.ವರದಿಗಳ ಪ್ರಕಾರ, ಸುಜಿತ್ ಈ ಐಷಾರಾಮಿ ಆಡಿ ಕಾರನ್ನು ಸೆಕೆಂಡ್ ಹ್ಯಾಂಡ್ ಕಾರಾಗಿ ಖರೀದಿಸಿದ್ದಾರೆ.ಈ ವಿಡಿಯೋ ನೋಡಿದ ಬಳಿಕ ಕೆಲವು ಯುವಕರು ತಮಾಷೆ ಪ್ರತಿಕ್ರಿಯೆಗಳು ಹೀಗಿತ್ತು, ತರಕಾರಿಗಳನ್ನು ಬೆಳೆಸುವುದಕ್ಕಿಂತ, ಮಾರಾಟ ಮಾಡುವುದಕ್ಕಿಂತ ಮೊದಲು ಆಡಿ ಖರೀದಿಸಬೇಕು..! ಎಂದೂ ಪ್ರತಿಕ್ರಿಯೆ ಮಾಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

23 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

23 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

23 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

23 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago