Advertisement
MIRROR FOCUS

#Agriculture | ಕೃಷಿ ಇಷ್ಟ ಪಟ್ಟು ದುಡಿದರೆ ಆಡಿ ಕಾರಲ್ಲಿ ಹೋಗಬಹುದು…! | ಕೇರಳದ ಯುವ ಕೃಷಿಕನ ಸ್ಟೋರಿ… |

Share

ಕೃಷಿ ಎಂದರೆ, ವ್ಯವಸಾಯ ಎಂದರೆ ನಷ್ಟ, ರೈತನ ಬದುಕೇ ಸಂಕಷ್ಟ ಎಂಬ ಋಣಾತ್ಮಕ ಭಾವನೆ ಎಲ್ಲೆಡೆಯೂ ಇದೆ. ಆದರೆ ಕೃಷಿಯನ್ನು ಇಷ್ಟಪಟ್ಟು, ಕೃಷಿಯೇ ಉಸಿರಾದರೆ ಯಶಸ್ಸು ಸಾಧ್ಯವಿದೆ. ಇದಕ್ಕೆ ಅನೇಕ ಉದಾಹರಣೆ ಇದೆ. ಇದೀಗ ಕೇರಳದ ಯುವಕನೊಬ್ಬ ಪಾಲಕ್‌ ಸೊಪ್ಪು ಮಾರಾಟಕ್ಕೆ  ಆಡಿ ಕಾರಲ್ಲಿ ಬಂದು ತಾನೇ ಸೊಪ್ಪು ಮಾರಾಟ ಮಾಡಿರುವುದು ಭಾರೀ ಸದ್ದು ಮಾಡಿದೆ.ಇನ್ಟಾಗ್ರಾಮ್‌ನ ರೀಲ್ಸ್‌ ಸದ್ದು ಮಾಡುತ್ತಿದೆ.

ರೈತ ಆಡಿ ಕಾರು ತೆಗೆಯಬಾರದೇ..?. ರೈತ ಆಡಿ ಕಾರಲ್ಲಿ ಬಂದಾಕ್ಷಣವೇ ಅದೇಕೆ ಸದ್ದಾಗುತ್ತಿದೆ..?. ಕಾರಣ ಇಷ್ಟೇ, ಕೃಷಿ ಎಂದರೆ ನಷ್ಟದ ಬದುಕು ಎಂಬ ಭಾವನೆ ಎಲ್ಲೆಡೆಯೂ ಇದೆ. ಆದರೆ ಕೃಷಿಯನ್ನು ವೈಜ್ಞಾನಿಕವಾಗಿ, ಯೋಜನಾಬದ್ಧವಾಗಿ ಮಾಡಿದರೆ ಯಶಸ್ಸು ಸಾಧ್ಯವಿದೆ ಎನ್ನುವುದಕ್ಕೆ ಕೇರಳದ ಯುವ ರೈತ ಸುಜಿತ್ ಸಾಕ್ಷಿಯಾಗಿದ್ದಾರೆ.

ರಸ್ತೆಬದಿಯ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಮಾರಲು ಕೇರಳದ ಈ ಯುವ ರೈತ ಐಷಾರಾಮಿ ಕಾರಿನಲ್ಲಿ ಬಂದಿದ್ದಾರೆ. 44 ಲಕ್ಷ ರೂ.ಗಳ ಬೆಲೆಯ ಸೆಡಾನ್ ಆಡಿ ಕಾರಲ್ಲಿ ಆಗಮಿಸಿ ತನ್ನ ಬಟ್ಟೆ ಬದಲಾಯಿಸಿಕೊಂಡು ತರಕಾರಿ ಮಾರಲು ಪ್ರಾರಂಭಿಸುತ್ತಾರೆ.

ವ್ಯವಸಾಯವು ಸಾಮಾನ್ಯವಾಗಿ ದೈಹಿಕವಾದ ಬೇಡಿಕೆಯನ್ನು ಮತ್ತು ಆರ್ಥಿಕವಾಗಿ ಕಡಿಮೆ ಇಳುವರಿ ಇರುತ್ತದೆ ಎನ್ನುವ ಭಾವನೆಯನ್ನು ಹೊಂದಿದೆ. ಆದ್ದರಿಂದ, ಯುವ ಪೀಳಿಗೆಯು ಇಂತಹ ಆಯ್ಕೆಯನ್ನು ಎರಡನೇಯದ್ದಾಗಿಸುತ್ತಾರೆ. ಆದರೆ ಈಗ ಬೇಡಿಕೆಯಲ್ಲಿರುವ ಸಾವಯವ ಕೃಷಿಯಂತಹ ಆಯ್ಕೆಗಳನ್ನು ಮಾಡಿದರೆ  ಉತ್ತಮ ಆರ್ಥಿಕ ಆದಾಯವನ್ನು ನೀಡುತ್ತದೆ. ಈ ಯುವ ರೈತ ಮಾಡಿರುವ ಕೆಲಸವೂ ಅದೇ. ಸಾವಯವ ಕೃಷಿ. ಕೇರಳದ ಯುವ ರೈತ ಸುಜಿತ್ ಈ ಬದಲಾವಣೆಗೆ ಉತ್ತಮ ಉದಾಹರಣೆ. ತರಕಾರಿ ಮಾರಾಟ ಮಾಡಲು ಮಾರುಕಟ್ಟೆಗೆ ಬಂದಿರುವ ದೃಶ್ಯ ಈಗ ವೈರಲ್‌ ಆಗುತ್ತಿದೆ.

ವೆರೈಟಿ ಫಾರ್ಮರ್ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಲಾಗಿತ್ತು.ವರದಿಗಳ ಪ್ರಕಾರ, ಸುಜಿತ್ ಈ ಐಷಾರಾಮಿ ಆಡಿ ಕಾರನ್ನು ಸೆಕೆಂಡ್ ಹ್ಯಾಂಡ್ ಕಾರಾಗಿ ಖರೀದಿಸಿದ್ದಾರೆ.ಈ ವಿಡಿಯೋ ನೋಡಿದ ಬಳಿಕ ಕೆಲವು ಯುವಕರು ತಮಾಷೆ ಪ್ರತಿಕ್ರಿಯೆಗಳು ಹೀಗಿತ್ತು, ತರಕಾರಿಗಳನ್ನು ಬೆಳೆಸುವುದಕ್ಕಿಂತ, ಮಾರಾಟ ಮಾಡುವುದಕ್ಕಿಂತ ಮೊದಲು ಆಡಿ ಖರೀದಿಸಬೇಕು..! ಎಂದೂ ಪ್ರತಿಕ್ರಿಯೆ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಭಾರಿ ಮಳೆ ತಗ್ಗುವ ಲಕ್ಷಣ; ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

58 seconds ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

10 minutes ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

5 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

5 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

5 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

21 hours ago