ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಆ್ಯಂಬುಲೆನ್ಸ್ನ ಕೀಯನ್ನು ಹಸ್ತಾಂತರಿಸಿದ್ದಾರೆ.
ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕಿಯರನ್ನು ನೇಮಿಸಲಾಗುವುದು. ಎಲ್ಲ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ಗಳನ್ನು ಚಲಾಯಿಸಲು ಒಬ್ಬ ಮಹಿಳೆಯನ್ನಾದರೂ ನೇಮಿಸಲಾಗುವುದು ಎಂದು ಹೇಳಿದರು.
ಜನರ ಆರೋಗ್ಯ ಸೇವೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬ ನನ್ನ ಕನಸು ಈಗ ನನಸಾಗಿದೆ ಎಂದು ದೀಪಮೋಳ್ ಹೇಳಿದ್ದಾರೆ. ದೀಪಮೋಳ್ ಅವರು ಆ್ಯಂಬುಲೆನ್ಸ್ ಚಲಾಯಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…