ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಆ್ಯಂಬುಲೆನ್ಸ್ನ ಕೀಯನ್ನು ಹಸ್ತಾಂತರಿಸಿದ್ದಾರೆ.
ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕಿಯರನ್ನು ನೇಮಿಸಲಾಗುವುದು. ಎಲ್ಲ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ಗಳನ್ನು ಚಲಾಯಿಸಲು ಒಬ್ಬ ಮಹಿಳೆಯನ್ನಾದರೂ ನೇಮಿಸಲಾಗುವುದು ಎಂದು ಹೇಳಿದರು.
ಜನರ ಆರೋಗ್ಯ ಸೇವೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬ ನನ್ನ ಕನಸು ಈಗ ನನಸಾಗಿದೆ ಎಂದು ದೀಪಮೋಳ್ ಹೇಳಿದ್ದಾರೆ. ದೀಪಮೋಳ್ ಅವರು ಆ್ಯಂಬುಲೆನ್ಸ್ ಚಲಾಯಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…